Hassan: ಎ ಟೀಂ, ಬಿ ಟೀಂ ಅನ್ನುವ ಜಮೀರ್ 2018ರಲ್ಲಿ ಯಾಕೆ ನಮ್ಮೊಂದಿಗೆ ಸೇರಿ ಸರ್ಕಾರ ರಚಿಸಿದರು? ಪ್ರಜ್ವಲ್ ರೇವಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Feb 06, 2023 | 1:32 PM

ಹಿಜಾಬ್ ವಿವಾದ ಸೃಷ್ಟಿಯಾದಾಗ ವಿಧಾನ ಸಭೆಯಲ್ಲಿ ಮಾತಾಡಿದ್ದು ಕುಮಾರಣ್ಣ (ಹೆಚ್ ಡಿ ಕುಮಾರಸ್ವಾಮಿ) ಮಾತ್ರ, ಜಮೀರ್ ಅಹ್ಮದ್, ಸಿದ್ದರಾಮಯ್ಯ ಮೊದಲಾದವರೆಲ್ಲ ಮೌನವಾಗಿದ್ದರು ಎಂದು ಪ್ರಜ್ವಲ್ ಹೇಳಿದರು.

ಹಾಸನ: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬಿ ಟೀಮ್ ಅಂತ ಹೇಳಿದ್ದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೆರಳುವಂತೆ ಮಾಡಿದೆ. ಹಾಸನದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಚುನಾವಣೆ ಹತ್ತಿರದಲ್ಲಿರುವಾಗ ಜಮೀರ್ ಅವರು ಎ ಟೀಮ್ ಬಿ ಟೀಮ್ ಅಂತ ಮಾತಾಡುತ್ತಾರೆ. ಆದರೆ ಕಳೆದ ಬಾರಿ ಜೆಡಿಎಸ್ ಜೊತೆ ಸೇರಿ ಕಾಂಗ್ರೆಸ್ ಸರ್ಕಾರ ರಚಿಸಿರಲಿಲ್ಲವೇ ಅಂತ ಪ್ರಶ್ನಿಸಿದರು. ಹಿಜಾಬ್ ವಿವಾದ ಸೃಷ್ಟಿಯಾದಾಗ ವಿಧಾನ ಸಭೆಯಲ್ಲಿ ಮಾತಾಡಿದ್ದು ಕುಮಾರಣ್ಣ (ಹೆಚ್ ಡಿ ಕುಮಾರಸ್ವಾಮಿ) ಮಾತ್ರ, ಜಮೀರ್ ಅಹ್ಮದ್, ಸಿದ್ದರಾಮಯ್ಯ ಮೊದಲಾದವರೆಲ್ಲ ಮೌನವಾಗಿದ್ದರು ಎಂದು ಪ್ರಜ್ವಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.