AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು-ಕೊಡಗು ಕ್ಷೇತ್ರಕ್ಕೆ ಪ್ರತಾಪ್ ಸಿಂಹನ ಕೊಡುಗೆ ಏನೂ ಇಲ್ಲ: ಕೆ ವೆಂಕಟೇಶ್, ಪಶು ಸಂಗೋಪನೆ ಸಚಿವ

ಮೈಸೂರು-ಕೊಡಗು ಕ್ಷೇತ್ರಕ್ಕೆ ಪ್ರತಾಪ್ ಸಿಂಹನ ಕೊಡುಗೆ ಏನೂ ಇಲ್ಲ: ಕೆ ವೆಂಕಟೇಶ್, ಪಶು ಸಂಗೋಪನೆ ಸಚಿವ

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 02, 2024 | 10:43 AM

Share

ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಕುಟುಂಬವನ್ನು ಮುಗಿಸಲು ಹೊರಟಿದ್ದಾರೆ ಎಂದು ಪ್ರತಾಪ್ ಹೇಳುತ್ತಿರೋದು ಹಾಸ್ಯಾಸ್ಪದ ಎಂದು ಸಚಿವ ಕೆ ವೆಂಕಟೇಶ್ ಹೇಳುತ್ತಾರೆ. ಸಿದ್ದರಾಮಯ್ಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮಗ ಕೊಡಗು-ಮೈಸೂರು ಕ್ಷೇತ್ರದ ಅಭ್ಯರ್ಥಿ ಅಂತ ಯಾವತ್ತೂ ಹೇಳಿಲ್ಲ ಮತ್ತು ಪ್ರತಾಪ್ ಸಿಂಹನ ಕುಟುಂಬವನ್ನು ಮುಗಿಸಲು ಅವರು ರಾಜಮನೆತನದವರೂ ಅಲ್ಲ ಎಂದು ವೆಂಕಟೇಶ್ ಹೇಳಿದರು.

ಚಾಮರಾಜನಗರ: ಮಂಗಳವಾರ ಬೆಳಗ್ಗೆ ನಗರದಲ್ಲಿ ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ ವೆಂಕಟೇಶ್ (K Venkatesh), ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ಮೇಲೆ ಮುಗಿಬಿದ್ದರು. ಡಿಸೆಂಬರ್ ತಿಂಗಳು ಶುರುವಾದ ಬಳಿಕ ಸಂಸದನಿಗೆ ಶನಿಕಾಟ ಶುರುವಾದಂತಿದೆ. ಸಂಸತ್ ಭವನಕ್ಕೆ (Parliament House) ಬಣ್ಣದ ಹೊಗೆಯುಗುಳುವ ಕ್ಯಾನಿಸ್ಟರ್ ಗಳನ್ನು ನುಗ್ಗಿದ ಯುವಕರ ಬಳಿ ಪ್ರತಾಪ್ ಸಿಂಹ ಹೆಸರಲ್ಲಿ ನೀಡಿದ ಪಾಸುಗಳಿದ್ದವು. ಅದಾದ ಮೇಲೆ ಅವರ ಸಹೋದರ ವಿಕ್ರಮ ಸಿಂಹನನ್ನು ಕಾಡಿನ ಮರಗಳನ್ನು ಕಡಿದ ಆರೋಪದಲ್ಲಿ ಬಂಧಿಸಲಾಯಿತು. ಈ ಹಿನ್ನೆಲೆಯಲ್ಲೇ ಕಾಂಗ್ರೆಸ್ ನಾಯಕರ ಟೀಕೆಗೆ ಅವರು ಗುರಿಯಾಗುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಮಬಲದಿಂದ ಮೈಸೂರು-ಕೊಡಗು ಕ್ಷೇತ್ರದಿಂದ ಎರಡು ಬಾರಿ ಲೋಕ ಸಭೆಗೆ ಆಯ್ಕೆಯಾಗಿರುವ ಪ್ರತಾಪ್ ಸಿಂಹ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಶೂನ್ಯ ಎಂದು ವೆಂಕಟೇಶ್ ಹೇಳಿದರು. ತಾವು ಪ್ರತಿನಿಧಿಸುವ ಪಿರಿಯಾಪಟ್ಟಣ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರತಾಪ್ ಒಂದೇ ಒಂದು ರಸ್ತೆ ಇದುವರೆಗೆ ಮಾಡಿಸಿಲ್ಲ ಎಂದು ಸಚಿವ ಹೇಳಿದರು. ಸುಳ್ಳು ಹೇಳಿಕೊಂಡು ತಿರುಗುವುದು ಬಿಟ್ಟರೆ ಸಂಸದನಿಗೆ ಬೇರೇನೂ ಗೊತ್ತಿಲ್ಲ ಎಂದು ವೆಂಕಟೇಶ್ ಛೇಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More