ಕಾಂಗ್ರೆಸ್ ನಾಯಕರನ್ನು ಉಗ್ರವಾಗಿ ಟೀಕಿಸುತ್ತಿದ್ದ ಎಂಪಿ ರೇಣುಕಾಚಾರ್ಯ ಇಂದು ಡಿಕೆ ಶಿವಕುಮಾರ್ರನ್ನು ಭೇಟಿಯಾದರು!
ಕನ್ನಡಿಗರಲ್ಲಿ ಅಚ್ಚರಿ ಹುಟ್ಟಿಸುತ್ತಿರುವ ಸಂಗತಿಯೆಂದರೆ, ಬಿಜೆಪಿ ನಾಯಕರು ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗುತ್ತಿರೋದು. ಕಳೆದ 3-4 ದಿನಗಳಿಂದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಕಾಂಗ್ರೆಸ್ ನಾಯಕರನ್ನು ಭೇಟಿಯಾಗುತ್ತಿದ್ದರೆ ಇವತ್ತು ರೇಣುಕಾಚಾರ್ಯ ಸರದಿ!
ಬೆಂಗಳೂರು: ಸಣ್ಣಪುಟ್ಟ ವಿದ್ಯಮಾನಗಳಿಗೂ ವಿಪರೀತ ಅರ್ಥ ಕಲ್ಪಿಸುವ ಜಾಯಮಾನ ನಮ್ಮದು. ಏನು ಮಾಡೋದೆ ಮಾರಾಯ್ರೇ ರಾಜ್ಯದ ರಾಜಕೀಯ ವಿದ್ಯಮಾನಗಳೇ ಹಾಗಿವೆ. ಕೆಲ ಬಿಜೆಪಿ ನಾಯಕರಿಗೆ ಅದೇನಾಗುತ್ತಿದೆಯೋ ಗೊತ್ತಿಲ್ಲ. ಇವತ್ತು ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ (MP Renukacharya) ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರನ್ನು (DK Shivakumar) ಅವರ ನಗರದ ಸದಾಶಿವನಗರದ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಕೆಂಪು ಶರ್ಟ್ ತೊಟ್ಟು ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ರೇಣುಕಾಚಾರ್ಯ ಅವರ ಕೈಯಲ್ಲಿ ಒಂದಷ್ಟು ಕಾಗದಗಳಿದ್ದವು. ಮನೆಯಲ್ಲಿ ಶಿವಕುಮಾರ್ ಜೊತೆ ಮಾತಾಡುವಾಗಲೂ ಸುರುಳಿ ಸುತ್ತಿದ್ದ ಆ ಪೇಪರ್ ಗಳು ಅವರ ಕೈಯಲ್ಲೇ ಇದ್ದವು. ಅವರ ನಡುವೆ ನಡೆದ ಮಾತುಕತೆಯ ವಿವರ ನಮಗೆ ಗೊತ್ತಿಲ್ಲ. ಕನ್ನಡಿಗರಲ್ಲಿ ಅಚ್ಚರಿ ಹುಟ್ಟಿಸುತ್ತಿರುವ ಸಂಗತಿಯೆಂದರೆ, ಬಿಜೆಪಿ ನಾಯಕರು ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು (CM Siddaramaiah) ಭೇಟಿಯಾಗುತ್ತಿರೋದು. ಕಳೆದ 3-4 ದಿನಗಳಿಂದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಕಾಂಗ್ರೆಸ್ ನಾಯಕರನ್ನು ಭೇಟಿಯಾಗುತ್ತಿದ್ದರೆ ಇವತ್ತು ರೇಣುಕಾಚಾರ್ಯ ಸರದಿ!
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್ಪೋರ್ಟ್ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ

