ಕಾಂಗ್ರೆಸ್ ನಾಯಕರನ್ನು ಉಗ್ರವಾಗಿ ಟೀಕಿಸುತ್ತಿದ್ದ ಎಂಪಿ ರೇಣುಕಾಚಾರ್ಯ ಇಂದು ಡಿಕೆ ಶಿವಕುಮಾರ್​ರನ್ನು ಭೇಟಿಯಾದರು!

ಕನ್ನಡಿಗರಲ್ಲಿ ಅಚ್ಚರಿ ಹುಟ್ಟಿಸುತ್ತಿರುವ ಸಂಗತಿಯೆಂದರೆ, ಬಿಜೆಪಿ ನಾಯಕರು ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗುತ್ತಿರೋದು. ಕಳೆದ 3-4 ದಿನಗಳಿಂದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಕಾಂಗ್ರೆಸ್ ನಾಯಕರನ್ನು ಭೇಟಿಯಾಗುತ್ತಿದ್ದರೆ ಇವತ್ತು ರೇಣುಕಾಚಾರ್ಯ ಸರದಿ!

ಕಾಂಗ್ರೆಸ್ ನಾಯಕರನ್ನು ಉಗ್ರವಾಗಿ ಟೀಕಿಸುತ್ತಿದ್ದ ಎಂಪಿ ರೇಣುಕಾಚಾರ್ಯ ಇಂದು ಡಿಕೆ ಶಿವಕುಮಾರ್​ರನ್ನು ಭೇಟಿಯಾದರು!
|

Updated on: Aug 25, 2023 | 5:53 PM

ಬೆಂಗಳೂರು: ಸಣ್ಣಪುಟ್ಟ ವಿದ್ಯಮಾನಗಳಿಗೂ ವಿಪರೀತ ಅರ್ಥ ಕಲ್ಪಿಸುವ ಜಾಯಮಾನ ನಮ್ಮದು. ಏನು ಮಾಡೋದೆ ಮಾರಾಯ್ರೇ ರಾಜ್ಯದ ರಾಜಕೀಯ ವಿದ್ಯಮಾನಗಳೇ ಹಾಗಿವೆ. ಕೆಲ ಬಿಜೆಪಿ ನಾಯಕರಿಗೆ ಅದೇನಾಗುತ್ತಿದೆಯೋ ಗೊತ್ತಿಲ್ಲ. ಇವತ್ತು ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ (MP Renukacharya) ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರನ್ನು (DK Shivakumar) ಅವರ ನಗರದ ಸದಾಶಿವನಗರದ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಕೆಂಪು ಶರ್ಟ್ ತೊಟ್ಟು ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ರೇಣುಕಾಚಾರ್ಯ ಅವರ ಕೈಯಲ್ಲಿ ಒಂದಷ್ಟು ಕಾಗದಗಳಿದ್ದವು. ಮನೆಯಲ್ಲಿ ಶಿವಕುಮಾರ್ ಜೊತೆ ಮಾತಾಡುವಾಗಲೂ ಸುರುಳಿ ಸುತ್ತಿದ್ದ ಆ ಪೇಪರ್ ಗಳು ಅವರ ಕೈಯಲ್ಲೇ ಇದ್ದವು. ಅವರ ನಡುವೆ ನಡೆದ ಮಾತುಕತೆಯ ವಿವರ ನಮಗೆ ಗೊತ್ತಿಲ್ಲ. ಕನ್ನಡಿಗರಲ್ಲಿ ಅಚ್ಚರಿ ಹುಟ್ಟಿಸುತ್ತಿರುವ ಸಂಗತಿಯೆಂದರೆ, ಬಿಜೆಪಿ ನಾಯಕರು ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು (CM Siddaramaiah) ಭೇಟಿಯಾಗುತ್ತಿರೋದು. ಕಳೆದ 3-4 ದಿನಗಳಿಂದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಕಾಂಗ್ರೆಸ್ ನಾಯಕರನ್ನು ಭೇಟಿಯಾಗುತ್ತಿದ್ದರೆ ಇವತ್ತು ರೇಣುಕಾಚಾರ್ಯ ಸರದಿ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ