MP Renukacharya: ಚುನಾವಣೆಯಲ್ಲಿ ಎಂಪಿ ರೇಣುಕಾಚಾರ್ಯ ಸೋತರೂ ಹೊನ್ನಾಳಿ ಕ್ಷೇತ್ರದಲ್ಲಿ ಜನಪ್ರಿಯತೆ ಕಳೆದುಕೊಂಡಿಲ್ಲ

ಅರುಣ್​ ಕುಮಾರ್​ ಬೆಳ್ಳಿ

Updated on: May 18, 2023 | 1:35 PM

ಮಾಚಗೊಂಡನಹಳ್ಳಿಗೆ ರೇಣುಕಾಚಾರ್ಯ ಬಂದಾಗ ಗ್ರಾಮಸ್ಥರು ಪುಷ್ಪಾರ್ಚನೆ ಮಾಡುತ್ತಾ ಆರತಿ ಬೆಳಗಿ ಅವರನ್ನು ಸ್ವಾಗತಿಸಿದರು.

ದಾವಣಗೆರೆ: ಹೊನ್ನಾಳಿ ಕ್ಷೇತ್ರದಲ್ಲಿ ಬಿಜೆಪಿ ಧುರೀಣ ಎಂಪಿ ರೇಣುಕಾಚಾರ್ಯ (MP Renukacharya) ಸೋತಿರಬಹುದು ಆದರೆ, ಜನರ ನಡುವೆ ಅವರ ಜನಪ್ರಿಯತೆ ಕಡಿಮೆಯಾಗಿಲ್ಲ ಮಾರಾಯ್ರೇ. ಸೋತ ನಂತರವೂ ಅವರು ಕ್ಷೇತ್ರದಲ್ಲಿ ತಾನು ಆರಂಭಿಸಿದ ಅಭಿವೃದ್ಧಿ ಕಾರ್ಯಗಳನ್ನು (development works) ಅವರು ವೀಕ್ಷಿಸುತ್ತಿದ್ದಾರೆ. ಮಾದಾಪುರದಲ್ಲಿ ಅವರು ಕಾಮಗಾರಿಗಳನ್ನು ವೀಕ್ಷಿಸಿ ಮಾಚಗೊಂಡನಹಳ್ಳಿಗೆ (Machagondanahalli) ಬಂದಾಗ ಗ್ರಾಮಸ್ಥರು ಪುಷ್ಪಾರ್ಚನೆ ಮಾಡುತ್ತಾ ಆರತಿ ಬೆಳಗಿ ಅವರನ್ನು ಸ್ವಾಗತಿಸಿದರು. ನಂತರ ಮಾಜಿ ಶಾಸಕರು ಜನರ ಸಮ್ಮುಖ ಕೇಕ್ ಕತ್ತರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.