ಬಿಜೆಪಿ ಸೇರುವಾಗ ಬಿಎಸ್​ವೈ ಕಾಲು ಹಿಡಿದಿದ್ದ ಯತ್ನಾಳ್ ಈಗ ಬೇರೆಯವರಿಂದ ಬಲಿಪಶು ಆಗುತ್ತಿದ್ದಾರೆ: ರೇಣುಕಾಚಾರ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Mar 15, 2025 | 3:47 PM

ರೇಣುಕಾಚಾರ್ಯ ಮಾತಿಗೆ ಕುಳಿತಾಗ ಬಸನಗೌಡ ಪಾಟೀಲ್ ಯತ್ನಾಳ್ ಪ್ರಸ್ತಾಪವಾಗದಿದ್ದರೆ ಮಾತು ಅಪೂರ್ಣವೆನಿಸುತ್ತದೆ. ಹಿಂದೆ ಬಿಎಸ್ ಯಡಿಯೂರಪ್ಪನವರ ಕಾಲು ಹಿಡಿದು ಬಿಜೆಪಿ ಸೇರಿ ಚುನಾವಣೆಗೆ ಟಿಕೆಟ್ ಪಡೆದಾಗ ಮಾಜಿ ಸಿಎಂ ಯತ್ನಾಳ್​ಗೆ ಒಳ್ಳೆಯವರಾಗಿದ್ದರು, ಈಗ ಸರಿಯಿಲ್ಲ! ಕೆಲವರು ಒಗ್ಗೂಡಿ ಯತ್ನಾಳ್​​ರನ್ನು ಬಲಿಪಶು ಮಾಡುತ್ತಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದರು.

ದಾವಣಗೆರೆ, ಮಾರ್ಚ್ 15: ಮಾಜಿ ಸಚಿವ ಎಂಪಿ ರೇಣುಕಾಚಾರ್ಯಗೆ ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡಿ ಏನು ಹೇಳಬೇಕು ಅನ್ನೋದು ಗೊತ್ತಾಗದೆ ಒದ್ದಾಡುತ್ತಿದ್ದಾರೆ. ದಿನಾಲೂ ಮಾತಾಡಿದರೆ ಅದಕ್ಕೆ ಬೆಲೆ ಇರಲ್ಲ ಅಂತ ಅವರ ಗಮನಕ್ಕೆ ಬೇಗ ಬಂದರೆ ಒಳ್ಳೇದು. ಅವರು ಬೆಂಗಳೂರು, ದಾವಣಗೆರೆ, ಬಳ್ಳಾರಿ ಅಥವಾ ರಾಜ್ಯದ ಬೇರೆ ಯಾವುದೇ ಜಿಲ್ಲೆಯಲ್ಲಿ ಮಾತಾಡಲಿ; ಪ್ರತಿಸಲ ಹೇಳಿದ್ದನ್ನೇ ಹೇಳುತ್ತಾರೆ. ಇವತ್ತು ಅವರು ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಮಹಾಸಭೆ (Veerashaiva Lingayat Mahasabha) ನಡೆಸುವ ಬಗ್ಗೆ ಪುನಃ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಸನಗೌಡ ಯತ್ನಾಳ್​ರನ್ನು ಮನಬಂದಂತೆ ಬಯ್ಯುತ್ತಿದ್ದ ರೇಣುಕಾಚಾರ್ಯ ವಿಜಯಪುರ ಶಾಸಕ ತಮ್ಮ ನಾಯಕನೆಂದರು!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.