ಮಂಗಳೂರು: ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲಾಗದ ಸಂಸದ ತೇಜಸ್ವೀ ಸೂರ್ಯ ಅಲ್ಲಿಂದ ಓಟಕಿತ್ತರು!

ಅರುಣ್​ ಕುಮಾರ್​ ಬೆಳ್ಳಿ

Updated on: Jul 29, 2022 | 4:14 PM

ಪತ್ರಕರ್ತರೊಬ್ಬರು ಸರ್ ನಿಮ್ಮ ಪ್ರಚೋದನಕಾರಿ ಹೇಳಿಕೆಗಳಿಂದ ಕೊಲೆಗಳಾಗುತ್ತಿವೆ ಎಂದು ಹೇಳಲಾಗುತ್ತಿದೆ ಅಂತ ಅನ್ನುವಾಗಲೇ ಸಂಸದರು ಪ್ರತಿಕ್ರಿಯಿಸದೆ ಅಲ್ಲಿಂದ ತಮ್ಮ ಕಾರಿನತ್ತ ಧಾವಿಸುತ್ತಾರೆ.

ಮಂಗಳೂರು: ಬಿಜೆಪಿ ಸಂಸದ ತೇಜಸ್ವೀ ಸೂರ್ಯ (Tejasvi Surya) ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಸ್ಥಳದಿಂದ ಪರಾರಿಯಾದ ಘಟನೆ ಶುಕ್ರವಾರ ಮಂಗಳೂರಲ್ಲಿ ನಡೆಯಿತು. ಪ್ರವೀಣ್ (Praveen Nettaru) ಕುಟಂಬಕ್ಕೆ ಪಕ್ಷ ನೀಡುತ್ತಿರುವ ನೆರವಿನ ಬಗ್ಗೆ ಮಾತಾಡುವಾಗ, ಪತ್ರಕರ್ತರೊಬ್ಬರು ಸರ್ ನಿಮ್ಮ ಪ್ರಚೋದನಕಾರಿ (provocative) ಹೇಳಿಕೆಗಳಿಂದ ಕೊಲೆಗಳಾಗುತ್ತಿವೆ ಎಂದು ಹೇಳಲಾಗುತ್ತಿದೆ ಅಂತ ಅನ್ನುವಾಗಲೇ ಸಂಸದರು ಪ್ರತಿಕ್ರಿಯಿಸದೆ ಅಲ್ಲಿಂದ ತಮ್ಮ ಕಾರಿನತ್ತ ಧಾವಿಸಿ ಹೋಗುವುದನ್ನು ವಿಡಿಯೋನಲ್ಲಿ ನೋಡಬಹುದು.

 

Published on: Jul 29, 2022 04:13 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.