AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ

ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ

ರಾಮ್​, ಮೈಸೂರು
| Edited By: |

Updated on: Oct 14, 2024 | 3:57 PM

Share

ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ವಿಚಾರವಾಗಿ ಇಂದು ಮೈಸೂರು ಲೋಕಾಯುಕ್ತ ಕಚೇರಿ ಭೇಟಿ ನೀಡಿದ ದೂರುದಾರ ಸ್ನೇಹಮಯಿ ಕೃಷ್ಣ ದಾಖಲೆಗಳನ್ನು ಕೊಟ್ಟಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಕಾಂಗ್ರೆಸ್​ ವಕ್ತಾರ ಎಂ.ಲಕ್ಷ್ಮಣ ವಿರುದ್ಧ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರು, ಅಕ್ಟೋಬರ್​ 14: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ತನಿಖೆ ನಡೆಸುವಂತೆ ದಾಖಲೆಗಳನ್ನು ಕೊಟ್ಟಿದ್ದೇನೆ. ಲೋಕಾಯುಕ್ತ ಅಧಿಕಾರಿಗಳಿಗೆ 25 ಪುಟಗಳ ಮಾಹಿತಿ ಕೊಟ್ಟಿದ್ದೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪದೇ ಪದೆ ಎಂ.ಲಕ್ಷ್ಮಣ ಲೋಕಾಯುಕ್ತ ಕಚೇರಿಗೆ ಬರುತ್ತಾರೆ. ಆ ಮೂಲಕ ಪ್ರಭಾವ ಬಿರುತ್ತಿದ್ದಾರೆ ಅಂತಾ ಅನ್ನಿಸುತ್ತೆ. ಹೀಗಾಗಿ ಲೋಕಾಯುಕ್ತಕ್ಕೆ ಸಿಸಿ ಕ್ಯಾಮರಾ ಅಳವಡಿಕೆ ಮಾಡಿ ಎಂದಿದ್ದೇನೆ. ಹೈಕೋರ್ಟ್​​ನಲ್ಲಿ ಸಿಎಂ ಕೆಲ ಮಾಹಿತಿ ಕೊಡದೆ ಮುಚ್ಚಿಟ್ಟಿದ್ದಾರೆ. ಆ ಎಲ್ಲಾ ಅಂಶಗಳನ್ನು ನಾನು ಹೇಳಿದ್ದೇನೆ. ವೈಟ್ನರ್ ಹಾಕಿರುವ ಮಾಹಿತಿಯನ್ನು ಕೋರ್ಟ್​ಗೆ ಕೊಟ್ಟಿಲ್ಲ. ಸಿಎಂ ಕೂಡ ಹೋದ ಕಡೆ ಪ್ರಚೋದನೆ ಹೇಳಿಕೆ ಕೊಡುತ್ತಿದ್ದಾರೆ. ಇದರಿಂದ ನನಗೆ ನನ್ನ ಕುಟುಂಬಕ್ಕೆ ಭಯವಿದೆ. ಈ ಬಗ್ಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More