ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್ ವಕ್ತಾರನ ಮೇಲೆ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ
ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ವಿಚಾರವಾಗಿ ಇಂದು ಮೈಸೂರು ಲೋಕಾಯುಕ್ತ ಕಚೇರಿ ಭೇಟಿ ನೀಡಿದ ದೂರುದಾರ ಸ್ನೇಹಮಯಿ ಕೃಷ್ಣ ದಾಖಲೆಗಳನ್ನು ಕೊಟ್ಟಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ ವಿರುದ್ಧ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.
ಮೈಸೂರು, ಅಕ್ಟೋಬರ್ 14: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ತನಿಖೆ ನಡೆಸುವಂತೆ ದಾಖಲೆಗಳನ್ನು ಕೊಟ್ಟಿದ್ದೇನೆ. ಲೋಕಾಯುಕ್ತ ಅಧಿಕಾರಿಗಳಿಗೆ 25 ಪುಟಗಳ ಮಾಹಿತಿ ಕೊಟ್ಟಿದ್ದೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪದೇ ಪದೆ ಎಂ.ಲಕ್ಷ್ಮಣ ಲೋಕಾಯುಕ್ತ ಕಚೇರಿಗೆ ಬರುತ್ತಾರೆ. ಆ ಮೂಲಕ ಪ್ರಭಾವ ಬಿರುತ್ತಿದ್ದಾರೆ ಅಂತಾ ಅನ್ನಿಸುತ್ತೆ. ಹೀಗಾಗಿ ಲೋಕಾಯುಕ್ತಕ್ಕೆ ಸಿಸಿ ಕ್ಯಾಮರಾ ಅಳವಡಿಕೆ ಮಾಡಿ ಎಂದಿದ್ದೇನೆ. ಹೈಕೋರ್ಟ್ನಲ್ಲಿ ಸಿಎಂ ಕೆಲ ಮಾಹಿತಿ ಕೊಡದೆ ಮುಚ್ಚಿಟ್ಟಿದ್ದಾರೆ. ಆ ಎಲ್ಲಾ ಅಂಶಗಳನ್ನು ನಾನು ಹೇಳಿದ್ದೇನೆ. ವೈಟ್ನರ್ ಹಾಕಿರುವ ಮಾಹಿತಿಯನ್ನು ಕೋರ್ಟ್ಗೆ ಕೊಟ್ಟಿಲ್ಲ. ಸಿಎಂ ಕೂಡ ಹೋದ ಕಡೆ ಪ್ರಚೋದನೆ ಹೇಳಿಕೆ ಕೊಡುತ್ತಿದ್ದಾರೆ. ಇದರಿಂದ ನನಗೆ ನನ್ನ ಕುಟುಂಬಕ್ಕೆ ಭಯವಿದೆ. ಈ ಬಗ್ಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us