AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಪ್ರಕರಣ ರಾಜಕೀಯ ಪ್ರೇರಿತ ಅಂತ ಮೊದಲೇ ಹೇಳಿದ್ದೆ, ನ್ಯಾಯಾಲಯ ಹೇಳಿದ್ದನ್ನು ಪಾಲಿಸುತ್ತೇವೆ: ಶಿವಕುಮಾರ್

ಮುಡಾ ಪ್ರಕರಣ ರಾಜಕೀಯ ಪ್ರೇರಿತ ಅಂತ ಮೊದಲೇ ಹೇಳಿದ್ದೆ, ನ್ಯಾಯಾಲಯ ಹೇಳಿದ್ದನ್ನು ಪಾಲಿಸುತ್ತೇವೆ: ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 07, 2025 | 7:48 PM

Share

ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಮಾತಾಡಿದ ಶಿವಕುಮಾರ್, ಅರಣ್ಯ ಇಲಾಖೆಯಿಂದ ಕೆಲಸ ಮುಂದುವರಿಸಲು ಅನುಮತಿ ಸಿಗುತ್ತಿಲ್ಲ, ಅವರಿಗೆ ಸುಮಾರು 170 ಹೆಕ್ಟೇರ್ ಬದಲೀ ಜಮೀನನ್ನು ನೀಡಬೇಕಿದೆ, ಮಾರ್ಚ್ 18ರಂದು ದೆಹಲಿಗೆ ತೆರಳಿ ಕೇಂದ್ರ ಅರಣ್ಯ ಸಚಿವರೊಂದಿಗೆ ಚರ್ಚೆ ಮಾಡುತ್ತೇನೆ; ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರಕ್ಕೆ ನೀರು ಕೊಟ್ಟೇ ಕೊಡುತ್ತೇವೆ ಎಂದು ಹೇಳಿದರು.

ಬೆಂಗಳೂರು, ಮಾರ್ಚ್​ 7 : ಮುಡಾ ಪ್ರಕರಣಕ್ಕೆ (MUDA case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಪಾರ್ವತಿ ಸಿದ್ದರಾಮಯ್ಯ ಮತ್ತು ಸಚಿವ ಭೈರತಿ ಸುರೇಶ್ ಜಾರಿ ಮಾಡಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದು ಮಾಡಿದೆ. ಈ ವಿಚಾರವವನ್ನು ಡಿಸಿಎಂ ಡಿಕೆ ಶಿವಕುಮಾರ್  ಗಮನಕ್ಕೆ ತಂದಾಗ, ತಮ್ಮ ಸರ್ಕಾರ ಯಾವತ್ತಿಗೂ ನ್ಯಾಯದ ಪರವಾಗಿ ಹೋರಾಟ ಮಾಡುತ್ತಾ ಬಂದಿದೆ, ಬೇರೆ ಕೇಸ್​ನಲ್ಲಿ ಕೂಡ ಸಮನ್ಸ್ ರದ್ದಾಗಿತ್ತು, ಕಾನೂನು ಮತ್ತು ನ್ಯಾಯಾಲಯ ಏನು ಹೇಳುತ್ತೋ ಅದನ್ನು ಪಾಲಿಸುತ್ತೇವೆ ಎಂದು ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಶಿವಕುಮಾರ್ ಆಡಿದ ಮಾತಗಳನ್ನು ಪದೇಪದೆ ವಿಶ್ಲೇಷಣೆ ಮಾಡೋದ್ರಲ್ಲಿ ಅರ್ಥವಿಲ್ಲ: ಶರತ್ ಲೋಹಿತಾಶ್ವ, ನಟ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.