ಸಿದ್ದರಾಮಯ್ಯಗೆ ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುತ್ತೆ: ಬಿಎಸ್​ವೈ ಭವಿಷ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ತೀರ್ಪು ಬಂದ ನಂತರ ರಾಜೀನಾಮೆ ಕೊಡುವ ಪರಿಸ್ಥಿತಿ ಬರುತ್ತೆ. ಅದಕ್ಕೂ ಮೊದಲೇ ಸಿಎಂ ರಾಜೀನಾಮೆ ಕೊಡುವುದು ಒಳ್ಳೇದು ಎಂದು ವಾಗ್ದಾಳಿ ಮಾಡಿದ್ದಾರೆ.

ಸಿದ್ದರಾಮಯ್ಯಗೆ ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುತ್ತೆ: ಬಿಎಸ್​ವೈ ಭವಿಷ್ಯ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 04, 2024 | 4:52 PM

ಶಿವಮೊಗ್ಗ, ಸೆಪ್ಟೆಂಬರ್​ 04: ತೀರ್ಪು ಬಂದ ನಂತರ ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುತ್ತೆ ಎಂದು ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದಕ್ಕೂ ಮೊದಲೇ ಸಿಎಂ ರಾಜೀನಾಮೆ ಕೊಡುವುದು ಒಳ್ಳೇದು. ಸಿದ್ದರಾಮಯ್ಯ ಮಾಡಿರುವ ಎಲ್ಲಾ ಹಗರಣ ಸಾಬೀತು ಆಗುತ್ತಿದೆ. ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸರ್ಕಾರಕ್ಕೆ ಕೊವಿಡ್​ ಹಗರಣದ ತನಿಖಾ ವರದಿ ಸಲ್ಲಿಕೆ ವಿಚಾರವಾಗಿ ಮಾತನಾಡಿದ್ದು, ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸರ್ಕಾರ ಸ್ವತಂತ್ರ ಇದೆ. ನಾವು ಯಾವುದೇ ಹೋರಾಟ ಮಾಡಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us