ನಿರ್ಗತಿಕರಿಗೆ ಸಿಗಬೇಕಿದ್ದ ಸೈಟುಗಳು ಮುಖ್ಯಮಂತ್ರಿ ಕುಟುಂಬದ ಪಾಲಾಗಿವೆ: ಬಿವೈ ವಿಜಯೇಂದ್ರ

ಹೆಚ್ ಕೆ ಪಾಟೀಲ್ ಅವರು ಕಾನೂನು ಸಚಿವರಾಗಿ ಹಳೆಯ ಹಗರಣಗಳ ಚರ್ಚೆಗೆ ಅವಕಾಶವಿಲ್ಲ ಎಂದಾಗ ಸಿದ್ದರಾಮಯ್ಯ ತಮ್ಮ ಸಚಿವನನ್ನು ತಡೆದು ಅರೋಪ ತನ್ನ ಕುಟುಂಬದ ಮೇಲೆ ಬಂದಿದೆ ಮತ್ತು ಅದಕ್ಕೆ ಉತ್ತರಿಸುವ ಜವಾಬ್ದಾರಿ ನನ್ನದಾಗಿದೆ, ನಾನು ಮಾತಾಡುತ್ತೇನೆ ಅಂತ ಹೇಳಿ ಸೈಟು ಸಿಕ್ಕಿರುವುದನ್ನು ಸಮರ್ಥನೆ ಮಾಡಿಕೊಳ್ಳಬಹುದಿತ್ತು, ಆದರೆ ಅವರು ಹಾಗೆ ಮಾಡಲಿಲ್ಲ ಎಂದು ವಿಜಯೇಂದ್ರ ಹೇಳಿದರು.

ನಿರ್ಗತಿಕರಿಗೆ ಸಿಗಬೇಕಿದ್ದ ಸೈಟುಗಳು ಮುಖ್ಯಮಂತ್ರಿ ಕುಟುಂಬದ ಪಾಲಾಗಿವೆ: ಬಿವೈ ವಿಜಯೇಂದ್ರ
|

Updated on: Jul 26, 2024 | 2:30 PM

ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿರದಿದ್ದರೆ ಮತ್ತು ಅವರಿಗೆ 14 ಸೈಟುಗಳು ನ್ಯಾಯಯುತವಾಗೇ ಸಿಕ್ಕಿದ್ದರೆ, ಯಾಕೆ ಚರ್ಚೆಯಿಂದ ಓಡಿಹೋಗುತ್ತಿದ್ದಾರೆ, ಯಾಕೆ ಪ್ರಶ್ನೆಗಳಿಗೆ ಉತ್ತರ ನೀಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರಶ್ನಿಸಿದರು. ಟಿವಿ9 ಗೆ ನೀಡಿದ ಎಕ್ಸ್​ಕ್ಲೂಸಿವ್ ಸಂದರ್ಶನದಲ್ಲಿ ಮಾತಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಲಕ್ಷಾಂತರ ಜನ ನಿವೇಶನಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ, ಆ ಅರ್ಜಿಗಳನ್ನು ಕಡೆಗಣಿಸಿ ಸಿದ್ದರಾಮಯ್ಯನವರ ಕುಟುಂಬಕ್ಕೆ ಸೈಟುಗಳನ್ನು ನೀಡಿರುವುದು ನ್ಯಾಯಯುತವೇ? ಅನ್ಯಾಯ ಅಕ್ರಮಗಳು ನಡೆದಾಗ ವಿರೋಧ ಪಕ್ಷದ ಸದಸ್ಯರಾಗಿರುವ ನಾವು ಪ್ರಶ್ನೆ ಕೇಳುತ್ತೇವೆ, ಅದು ನಮ್ಮ ಅಧಿಕಾರ ಮತ್ತು ಹಕ್ಕು. ಪ್ರಶ್ನೆಗಳಿಗೆ ಉತ್ತರ ನೀಡುವುದು ಸರ್ಕಾರದ ಮುಖ್ಯಸ್ಥನಾಗಿರುವ ಮುಖ್ಯಮಂತ್ರಿಯವರ ಜವಾಬ್ದಾರಿ, ಅವರು ಪಲಾಯನ ಮಾಡುವುದರಲ್ಲಿ ಅರ್ಥವಿಲ್ಲ. ಮುಡಾ ಹಗರಣದ ಬಗ್ಗೆ ನಾವು ವಿರೋಧ ಪಕ್ಷವಾಗಿ ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ವಿಜಯೇಂದ್ರ ಹೇಳಿದರು. ಪರಿಶಿಷ್ಠ ಜಾತಿ/ಪಂಗಡ ಸಮುದಾಯಗಳ ಜನರಿಗೆ ಸಿಗಬೇಕಿದ್ದ ಸೈಟುಗಳು ಪ್ರತಿಷ್ಠಿತ ಕುಟುಂಬದ ಪಾಲಾಗಿರುವುದು ನಿಜಕ್ಕೂ ವಿಷಾದನೀಯ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮುಡಾ ಹಗರಣದ ಕಡತಗಳನ್ನು ಸಚಿವ ಭೈರತಿ ಸುರೇಶ್ ಬೆಂಗಳೂರಿಗೆ ಎತ್ತಿಕೊಂಡು ಬಂದಿದ್ದಾರೆ: ಬಿವೈ ವಿಜಯೇಂದ್ರ

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ