ರೈತರ ಕಷ್ಟ ಗೊತ್ತೇನ್ರೀ? ಎಸಿ ರೂಮಲ್ಲಿ ಕುಳಿತುಕೊಂಡು ರೈತರ ಕಷ್ಟ ಕೇಳೋ ರಾಜಕಾರಣಿಗಳಿಗೆ ವಿದ್ಯಾರ್ಥಿನಿ ಖಡಕ್ ಪ್ರಶ್ನೆ

Edited By:

Updated on: Nov 13, 2025 | 2:06 PM

ಕಬ್ಬು ಬೆಳೆಗಾರರ ಹೋರಾಟಕ್ಕೆ ವಿದ್ಯಾರ್ಥಿನಿ ಧ್ವನಿಯಾಗಿದ್ದು, ಎಸಿ ರೂಂನಲ್ಲಿ ಕುಳಿತು ರೈತರ ಕಷ್ಟ ಅರ್ಥಮಾಡಿಕೊಳ್ಳುವುದಾಗಿ ಹೇಳುವ ರಾಜಕಾರಣಿಗಳಿಗೆ ಖಡಕ್ ಪ್ರಶ್ನೆ ಹಾಕಿದ್ದಾರೆ. ಮುಧೋಳದಲ್ಲಿ ಪ್ರತಿಭಟನಾಕಾರರ ಜತೆ ಸೇರಿ ಮಾತನಾಡಿದ ವಿದ್ಯಾರ್ಥಿನಿ, ಕಬ್ಬಿಗೆ ಪ್ರತಿ ಟನ್‌ಗೆ 3,500 ರೂಪಾಯಿ ನೀಡುವಂತೆ ಆಗ್ರಹಿಸಿದ್ದು, ಇದು ಕೇವಲ ಬೇಡಿಕೆಯಲ್ಲ, ರೈತರ ಹಕ್ಕು ಎಂದಿದ್ದಾರೆ.

ಬಾಗಲಕೋಟೆ, ನವೆಂಬರ್ 13: ಕ್ವಿಂಟಲ್ ಕಬ್ಬಿಗೆ 3,500 ರೂ. ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಶಿರೋಳದ ರಮೇಶ್ ಗಡದನ್ನವರ ಹೈಸ್ಕೂಲ್‌ ವಿದ್ಯಾರ್ಥಿಗಳೂ ಬೆಂಬಲ ಸೂಚಿಸಿದ್ದಾರೆ. ಇದೇ ವೇಳೆ, ವಿದ್ಯಾರ್ಥಿನಿಯೊಬ್ಬರು ಆಕ್ರೋಶದಿಂದ ಮಾತನಾಡಿರುವುದು ಗಮನ ಸೆಳೆದಿದೆ. ರೈತರು ಹಗಲಿರುಳು ದುಡಿದು ಬೆಳೆ ಬೆಳೆದರೂ ಕಾರ್ಖಾನೆ ಮಾಲೀಕರು ಮತ್ತು ಸರ್ಕಾರ ಅವರ ಪರಿಶ್ರಮಕ್ಕೆ ತಕ್ಕ ಬೆಲೆ ನೀಡುತ್ತಿಲ್ಲ ಎಂದು ವಿದ್ಯಾರ್ಥಿನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರು ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿಗಳ ಬೆಲೆಯನ್ನು ಕೇಳುತ್ತಿದ್ದು, ಇದು ಅವರ ಹಕ್ಕು ಎಂದು ಪ್ರತಿಪಾದಿಸಿದ್ದಾರೆ. ರೈತರು ಸಾಲ ಮಾಡಿ ಕಬ್ಬು ಬೆಳೆಯುತ್ತಾರೆ, ಆದರೆ ಕೊನೆಗೆ ಅವರ ಕೈಗೆ ಏನೂ ಉಳಿಯುವುದಿಲ್ಲ. ಒಂದು ಕೆಜಿ ಸಕ್ಕರೆಗೆ 42 ರೂಪಾಯಿ ಸಿಗುವಾಗ, ಒಂದು ಟನ್ ಕಬ್ಬಿಗೆ 3,500 ರೂಪಾಯಿ ನೀಡುವುದು ನ್ಯಾಯಯುತವಾಗಿದೆ. ರೈತರ ತಾಳ್ಮೆಯನ್ನು ಪರೀಕ್ಷಿಸಬಾರದು ಎಂದು ವಿದ್ಯಾರ್ಥಿನಿ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More