ಪಟ್ಟು ಬಿಡದ ಮುಧೋಳ ಕಬ್ಬು ಬೆಳೆಗಾರರು: ಸಂಧಾನ ವಿಫಲ, ನಾಳೆ ಪ್ರತಿಭಟನಾ ರ‍್ಯಾಲಿ

Edited By:

Updated on: Nov 09, 2025 | 10:29 PM

ಕಬ್ಬಿನ ಬೆಲೆ ನಿಗದಿ ಕುರಿತು ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತರ ನಡುವಿನ ಸಂಧಾನ ಸಭೆ ವಿಫಲವಾಗಿದೆ. ಮುಧೋಳದಲ್ಲಿ ನಾಳೆ ಬೃಹತ್ ಪ್ರತಿಭಟನೆಗೆ ರೈತರು ಸಿದ್ಧರಾಗಿದ್ದಾರೆ. ಸರ್ಕಾರ ಮತ್ತು ಕಾರ್ಖಾನೆಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಹೋರಾಟ ಮುಂದುವರಿಸಲು ನಿರ್ಧರಿಸಿದ್ದಾರೆ. ವಿಡಿಯೋ ನೋಡಿ.

ಬಾಗಲಕೋಟೆ, ನವೆಂಬರ್​ 09: ರಾಜ್ಯದಲ್ಲಿ ಕಬ್ಬಿನ ದರ ನಿಗದಿ ವಿಚಾರ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ.  ನಿನ್ನೆಯಷ್ಟೇ ಸರ್ಕಾರ ಪ್ರತಿ ಟನ್​ ಕಬ್ಬಿಗೆ 3 ಸಾವಿರದ 300 ರೂ. ಫಿಕ್ಸ್ ಮಾಡಿರೋದಕ್ಕೆ ಬೆಳಗಾವಿ ರೈತರು ಒಪ್ಪಿಕೊಂಡಿದ್ದರು. ಆದರೆ ಬಾಗಲಕೋಟೆ ಜಿಲ್ಲೆಯ ಮುಧೋಳ ರೈತರು ಮಾತ್ರ ತಮ್ಮ ಪಟ್ಟು ಸಡಿಲಿಸುತ್ತಿಲ್ಲ. ನಮಗೆ 3 ಸಾವಿರದ 500 ರೂ. ಕೊಡಬೇಕು ಎನ್ನುತ್ತಿದ್ದಾರೆ. ನಾಳೆ ಮುಧೋಳ‌ ನಗರದಲ್ಲಿ ಬೃಹತ್​ ಪ್ರತಿಭಟನಾ ರ‍್ಯಾಲಿ ಮಾಡುತ್ತೇವೆ ಎಂದು ಮುಧೋಳದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More