AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಡಿಗೆರೆ ಶಾಸಕ ಎಮ್ ಪಿ ಕುಮಾರಸ್ವಾಮಿ ವಿರುದ್ಧ ಭುಗಿಲೆದ್ದ ಆಕ್ರೋಶ, ಟಿಕೆಟ್ ನೀಡದಂತೆ ಸಿಟಿ ರವಿ ಮನೆಗೆ ಕಾರ್ಯಕರ್ತರ ಮುತ್ತಿಗೆ!

ಮೂಡಿಗೆರೆ ಶಾಸಕ ಎಮ್ ಪಿ ಕುಮಾರಸ್ವಾಮಿ ವಿರುದ್ಧ ಭುಗಿಲೆದ್ದ ಆಕ್ರೋಶ, ಟಿಕೆಟ್ ನೀಡದಂತೆ ಸಿಟಿ ರವಿ ಮನೆಗೆ ಕಾರ್ಯಕರ್ತರ ಮುತ್ತಿಗೆ!

ಅರುಣ್​ ಕುಮಾರ್​ ಬೆಳ್ಳಿ
|

Updated on:Mar 22, 2023 | 7:10 PM

ಕಳೆದವಾರ ಜಿಲ್ಲೆಗೆ ಬಿಎಸ್ ಯಡಿಯೂರಪ್ಪ ಆಗಮಿಸಿದಾಗಲೂ ಕಾರ್ಯಕರ್ತರು ತೀವ್ರ ಸ್ವರೂಪದ ಆಕ್ರೋಶ ವ್ಯಕ್ತಪಡಿಸಿದ್ದ್ದರಿಂದ ವಿಜಯಸಂಕಲ್ಪ ಯಾತ್ರೆಯನ್ನು ರದ್ದು ಮಾಡಲಾಗಿತ್ತು.

ಚಿಕ್ಕಮಗಳೂರು: ಮೂಡಿಗೆರೆಯ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿಯವರ (MP Kumaraswamy) ಪಕ್ಷದಲ್ಲಿನ ದಿನಗಳು ಮುಗಿದಂತಿವೆ. ಮೂಡಿಗೆರೆಯ ಕ್ಷೇತ್ರದ ಕಾರ್ಯಕರ್ತರು ಕುಮಾರಸ್ವಾಮಿಯಿಂದ ಅದೆಷ್ಟು ಬೇಸತ್ತಿದ್ದಾರೆಂದರೆ ಹಬ್ಬದ ದಿನವಾದ ಇಂದು ನೂರಾರು ಸಂಖ್ಯೆಯಲ್ಲಿ ಗುಂಪುಗೂಡಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ (National secretary) ಮತ್ತು ಚಿಕ್ಕಮಗಳೂರು ಶಾಸಕ ಸಿಟಿ ರವಿ (CT Ravi) ಮನೆಗೆ ಮುತ್ತಿಗೆ ಹಾಕಿ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಆಗ್ರಹಿಸಿದರು. ನಗರದ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ರವಿ ಮನೆ ಮುಂದೆ ಕಾರ್ಯಕರ್ತರನ್ನು ನೋಡಬಹುದು. ಕಳೆದವಾರ ಜಿಲ್ಲೆಗೆ ಬಿಎಸ್ ಯಡಿಯೂರಪ್ಪ ಆಗಮಿಸಿದಾಗಲೂ ಕಾರ್ಯಕರ್ತರು ತೀವ್ರ ಸ್ವರೂಪದ ಆಕ್ರೋಶ ವ್ಯಕ್ತಪಡಿಸಿದ್ದ್ದರಿಂದ ವಿಜಯಸಂಕಲ್ಪ ಯಾತ್ರೆಯನ್ನು ರದ್ದು ಮಾಡಲಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 22, 2023 07:10 PM