‘ಅಪ್ಪು ಸರ್ ಜತೆ ನಾನು ವರ್ಕೌಟ್ ಮಾಡ್ತಿದ್ದೆ’; ಪುನೀತ್ ಜತೆಗಿನ ನೆನಪು ಹಂಚಿಕೊಂಡ ಮನುರಂಜನ್
Manuranjan Ravichandran: ಪುನೀತ್ ರಾಜ್ಕುಮಾರ್ ಬಗ್ಗೆ ಮನುರಂಜನ್ ರವಿಚಂದ್ರನ್ ಮಾತನಾಡಿದ್ದಾರೆ. ‘ಇಂದು ಪುನೀತ್ ಅವರು ನಮ್ಮೊಂದಿಗಿಲ್ಲ. ಆದರೆ ಅವರು ಎಲ್ಲರ ಎದೆಯಲ್ಲೂ ಶಾಶ್ವತವಾಗಿ ಇರುತ್ತಾರೆ’ ಎಂದಿದ್ದಾರೆ ಮನುರಂಜನ್.
ಎಲ್ಲರಿಗೂ ಪ್ರೀತಿ ಹಂಚುತ್ತಿದ್ದ ವ್ಯಕ್ತಿ ಆಗಿದ್ದರು ನಟ ಪುನೀತ್ ರಾಜ್ಕುಮಾರ್. ಅವರ ಜತೆ ಕಳೆದ ದಿನಗಳನ್ನು ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ (Manuranjan Ravichandran) ಅವರು ಮೆಲುಕು ಹಾಕಿದ್ದಾರೆ. ವಿಶೇಷ ಏನೆಂದರೆ, ಮೂರು ವರ್ಷಗಳ ಹಿಂದೆ ಪುನೀತ್ ರಾಜ್ಕುಮಾರ್ (Puneeth Rajkumar) ಮತ್ತು ಮನುರಂಜನ್ ಅವರು ಒಂದೇ ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಆಗ ಪುನೀತ್ ಮಾಡುತ್ತಿದ್ದ ಕಸರತ್ತುಗಳನ್ನು ನೋಡಿ ಮನುರಂಜನ್ ಅಚ್ಚರಿಪಟ್ಟಿದ್ದರು. ‘ಅಪ್ಪು ಸರ್ ಜೊತೆ ನಾನು ಒಂದೇ ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದೆ. ಅವರ ರೀತಿ ವರ್ಕೌಟ್ ಮಾಡಲು ನಮ್ಮಿಂದ ಸಾಧ್ಯವಿಲ್ಲ. ಇಂದು ಪುನೀತ್ ಅವರು ನಮ್ಮೊಂದಿಗಿಲ್ಲ. ಆದರೆ ಅವರು ಎಲ್ಲರ ಎದೆಯಲ್ಲೂ ಶಾಶ್ವತವಾಗಿ ಇರುತ್ತಾರೆ’ ಎಂದಿದ್ದಾರೆ ಮನುರಂಜನ್. ಅವರ ನಟನೆಯ ‘ಮುಗಿಲ್ ಪೇಟೆ’ (Mugilpete Kannada movie) ಸಿನಿಮಾ ನ.19ರಂದು ರಾಜ್ಯಾದ್ಯಂತ ಬಿಡುಗಡೆ ಆಗಿದೆ.
ಇದನ್ನೂ ಓದಿ:
ಮೈತುಂಬ ಅಪ್ಪು ಚಿತ್ರ, 300 ಕಿಮೀ ಸೈಕಲ್ ಸವಾರಿ; ಪುನೀತ್ ಸಮಾಧಿಗೆ ಅಪರೂಪದ ಅಭಿಮಾನಿ ಭೇಟಿ
ಶಕ್ತಿಧಾಮ ನೋಡಿಕೊಳ್ಳುವ ಬಗ್ಗೆ ಅಶ್ವಿನಿ ಜತೆ ವಿಶಾಲ್ ಚರ್ಚೆ; ಪುನೀತ್ ಕುಟುಂಬದಿಂದ ಅನುಮತಿ ಸಿಗೋದು ಯಾವಾಗ?
Published on: Nov 19, 2021 09:59 AM
ಮೂವರ ಶೂಟೌಟ್ ಕೇಸ್: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ

