ಮುಲ್ಕಿ ಬಳಿ ಸರಣಿ ಅಪಘಾತ ಪ್ರಕರಣ; ಲಾರಿ ಚಾಲಕನ ಬಂಧನ, ಇಲ್ಲಿದೆ ಅಪಘಾತದ ಭಯಾನಕ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Dec 07, 2023 | 4:30 PM

ಮುಲ್ಕಿ ಬಳಿ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲಾರಿ ಚಾಲಕ ಮಂಜುನಾಥ್(25) ಎಂಬಾತನನ್ನು ಬಂಧಿಸಿ, ಟ್ರಕ್(Truck)​ನನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಅಪಘಾತ(Accident)ದಲ್ಲಿ ಲೇಡಿ ಹೆಡ್ ಕಾನ್ಸ್ಟೇಬಲ್ ಗೀತಾ, ಆಟೋ ಸವಾರ ಧರ್ಮೇಂದ್ರ, ಬೈಕ್ ಸಹ ಸವಾರ ಸವಿತಾ ಎಂಬುವವರಿಗೆ ಸಣ್ಣ ಪುಟ್ಟ ಗಾಯಗಳಾದರೆ, ಬೈಕ್ ಸವಾರ‌ ಸಂಗಪ್ಪ ಎಂಬುವವರಿಗೆ ಗಂಭೀರ ಗಾಯವಾಗಿದೆ.

ದಕ್ಷಿಣ ಕನ್ನಡ, ಡಿ.07: ಮುಲ್ಕಿ ಬಳಿ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲಾರಿ ಚಾಲಕ ಮಂಜುನಾಥ್(25) ಎಂಬಾತನನ್ನು ಬಂಧಿಸಿ, ಟ್ರಕ್(Truck)​ನನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಅಪಘಾತ(Accident)ದಲ್ಲಿ ಲೇಡಿ ಹೆಡ್ ಕಾನ್ಸ್ಟೇಬಲ್ ಗೀತಾ, ಆಟೋ ಸವಾರ ಧರ್ಮೇಂದ್ರ, ಬೈಕ್ ಸಹ ಸವಾರ ಸವಿತಾ ಎಂಬುವವರಿಗೆ ಸಣ್ಣ ಪುಟ್ಟ ಗಾಯಗಳಾದರೆ, ಬೈಕ್ ಸವಾರ‌ ಸಂಗಪ್ಪ ಎಂಬುವವರಿಗೆ ಗಂಭೀರ ಗಾಯವಾಗಿದೆ. ಅಪಾರ್ಟ್​ಮೆಂಟ್​ಲ್ಲಿ ವಾಚ್ಮನ್‌ ಆಗಿರುವ ಸಂಗಪ್ಪ, ಮಗಳನ್ನು ಬಸ್ ಸ್ಟ್ಯಾಂಡ್​ಗೆ ಬಿಡಲು ಬಂದಿದ್ದ. ಮಗಳು‌ ಸವಿತಾ, ಸಣ್ಣ ಪುಟ್ಟ ಗಾಯಗಳಿಂದ ಅಪಾಯ‌ದಿಂದ ಪಾರಾಗಿದ್ದಾರೆ. ಇನ್ನು ರಸ್ತೆ ಬದಿಯಲ್ಲಿ ಕುಳಿತಿದ್ದ ಕೂಲಿ ಕಾರ್ಮಿಕರತ್ತ ಲಾರಿ ನುಗ್ಗಿ ಬಂದಿದೆ. ಕೂದಲೆಳೆ ಅಂತರದಿಂದ ಕೂಲಿ ಕಾರ್ಮಿಕರು ಪಾರಾಗಿದ್ದಾರೆ. ಇನ್ನು ಅಪಘಾತದ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More