Video: 17 ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿಟ್ಟುಕೊಂಡು ನಾನೇನು ಭಯೋತ್ಪಾದಕನಲ್ಲ ಎಂದಿದ್ದ ರೋಹಿತ್ ಆರ್ಯ

Updated on: Oct 31, 2025 | 11:34 AM

ಮುಂಬೈನ ಪೂವೈನಲ್ಲಿರುವ ಸ್ಟುಡಿಯೋದಲ್ಲಿ ರೋಹಿತ್ ಆರ್ಯ ಎಂಬಾತ 17 ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದ. ಗುರುವಾರ ಪೊಲೀಸರ ಗುಂಡೇಟಿಗೆ ಆತ ಬಲಿಯಾಗಿದ್ದ. ಆತ ಸಾಯುವುದಕ್ಕೂ ಮುನ್ನ ಬಿಡುಗಡೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಮುಂಬೈ ಪೊಲೀಸ್ ಮೂಲಗಳು ತಿಳಿಸುವಂತೆ ಆತ ನಾಗ್ಪುರದ ಯೂಟ್ಯೂಬರ್ ಮತ್ತು ಶಾಲಾ ಶಿಕ್ಷಕರಾಗಿದ್ದರು. ನಾನೇನು ಭಯೋತ್ಪಾದಕನಲ್ಲ, ಕೆಲವು ಜನರೊಂದಿಗೆ ಮಾತನಾಡಲು ಬಯಸುತ್ತೇನೆ, ಅದಕ್ಕೆ ಅನುಮತಿ ಮಾಡಿಕೊಡದಿದ್ದರೆ ಎಲ್ಲರನ್ನೂ ಬೆಂಕಿ ಹಚ್ಚಿ ಸಾಯಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ

ಪುಣೆ, ಅಕ್ಟೋಬರ್ 31: ಮುಂಬೈನ ಪೂವೈನಲ್ಲಿರುವ ಸ್ಟುಡಿಯೋದಲ್ಲಿ ರೋಹಿತ್ ಆರ್ಯ ಎಂಬಾತ 17 ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದ. ಗುರುವಾರ ಪೊಲೀಸರ ಗುಂಡೇಟಿಗೆ ಆತ ಬಲಿಯಾಗಿದ್ದ. ಆತ ಸಾಯುವುದಕ್ಕೂ ಮುನ್ನ ಬಿಡುಗಡೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಮುಂಬೈ ಪೊಲೀಸ್ ಮೂಲಗಳು ತಿಳಿಸುವಂತೆ ಆತ ನಾಗ್ಪುರದ ಯೂಟ್ಯೂಬರ್ ಮತ್ತು ಶಾಲಾ ಶಿಕ್ಷಕರಾಗಿದ್ದರು. ನಾನೇನು ಭಯೋತ್ಪಾದಕನಲ್ಲ, ಕೆಲವು ಜನರೊಂದಿಗೆ ಮಾತನಾಡಲು ಬಯಸುತ್ತೇನೆ, ಅದಕ್ಕೆ ಅನುಮತಿ ಮಾಡಿಕೊಡದಿದ್ದರೆ ಎಲ್ಲರನ್ನೂ ಬೆಂಕಿ ಹಚ್ಚಿ ಸಾಯಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ. ನನಗೆ ಹೆಚ್ಚಿನ ಬೇಡಿಕೆಗಳಿಲ್ಲ, ಕೆಲವು ನೈತಿಕ ಬೇಡಿಕೆಗಳಷ್ಟೇ, ಹೆಚ್ಚು ಹಣವನ್ನೂ ಕೇಳುವುದಿಲ್ಲ, ಕೆಲವು ಪ್ರಶ್ನೆಗಳಿವೆ, ಅದಕ್ಕೆ ಉತ್ತರ ಬೇಕು ಎಂದು ವಿಡಿಯೋದಲ್ಲಿ ಹೇಳಿದ್ದ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More