ಮಸೂದ್, ಪ್ರವೀಣ್ ಮತ್ತು ಫಾಜಿಲ್-ಎಲ್ಲರ ಕೊಲೆಗಳನ್ನು ಸರ್ಕಾರ ಸಮಾನದೃಷ್ಟಿಯಿಂದ ನೋಡಬೇಕು: ಯುಟಿ ಖಾದರ್
ಮುಖ್ಯಮಂತ್ರಿಗಳು ಈ ಭಾಗದಲ್ಲಿರುವಾಗಲೇ ಫಾಜಿಲ್ ಹತ್ಯೆ ನಡೆಯುತ್ತದೆ ಅಂದರೆ ಜನರಿಗೆ ಸರ್ಕಾರದಿಂದ ನ್ಯಾಯ ಸಿಗುವ ಬಗ್ಗೆ ವಿಶ್ವಾಸವಿಲ್ಲ ಅನ್ನೋದು ಸಾಬೀತಾಗುತ್ತದೆ ಎಂದು ಖಾದರ್ ಹೇಳಿದರು.
ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ (Surathkal) ಗುರವಾರ ಸಾಯಂಕಾಲ ಫಾಜಿಲ್ (Fazil) ಹೆಸರಿನ ಯುವಕನ ಹತ್ಯೆ ನಡೆದಿದ್ದು ಶುಕ್ರವಾರ ಬೆಳಗ್ಗೆ ಮಂಗಳೂರಲ್ಲಿ ಸುದ್ದಗಾರರೊಂದಿಗೆ ಮಾತಾಡಿದ ಕಾಂಗ್ರೆಸ್ ಶಾಸಕ ಯುಟಿ ಖಾದರ್ (UT Khader), ಕರಾವಳಿ ಭಾಗದಲ್ಲಿ ಇತ್ತೀಚಿಗೆ ಮಸೂದ್, ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್-ಮೂವರ ಕೊಲೆ ನಡೆದಿದೆ. ಸರ್ಕಾರ ಎಲ್ಲ ಹತ್ಯೆಗಳನ್ನು ಸಮಾನ ದೃಷ್ಟಿಯಿಂದ ನೋಡಬೇಕು, ತಾರತಮ್ಯ ಧೋರಣೆ ಪ್ರದರ್ಶಿಸಬಾರದು ಎಂದು ಹೇಳಿದರು. ಮುಖ್ಯಮಂತ್ರಿಗಳು ಈ ಭಾಗದಲ್ಲಿರುವಾಗಲೇ ಫಾಜಿಲ್ ಹತ್ಯೆ ನಡೆಯುತ್ತದೆ ಅಂದರೆ ಜನರಿಗೆ ಸರ್ಕಾರದಿಂದ ನ್ಯಾಯ ಸಿಗುವ ಬಗ್ಗೆ ವಿಶ್ವಾಸವಿಲ್ಲ ಅನ್ನೋದು ಸಾಬೀತಾಗುತ್ತದೆ ಎಂದು ಖಾದರ್ ಹೇಳಿದರು.
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

