ದರ್ಶನ್ ಹೊರಗೆ ಬಂದ್ರೆ ನಮಗೆ ಖುಷಿ; ತಪ್ಪು ಮಾಡಿದ್ದರೆ ಕಾನೂನು ಕ್ರಮ ಆಗಲಿ: ಗುರು ಕಿರಣ್
ನಟ ದರ್ಶನ್ ಕೇಸ್ ಬಗ್ಗೆ ಈಗಾಗಲೇ ಚಿತ್ರರಂಗದ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಈಗ ಸಂಗೀತ ನಿರ್ದೇಶಕ ಗುರು ಕಿರಣ್ ಕೂಡ ಮಾತನಾಡಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡರು. ‘ದರ್ಶನ್ ಪ್ರಕರಣ ವೈಯಕ್ತಿಕ. ಅದಕ್ಕೂ ಸಿನಿಮಾ ರಂಗಕ್ಕೂ ಸಂಬಂಧ ಇಲ್ಲ’ ಎಂದು ಗುರು ಕಿರಣ್ ಹೇಳಿದ್ದಾರೆ.
ಚಿತ್ರರಂಗದಲ್ಲಿ ದರ್ಶನ್ ಮತ್ತು ಗುರು ಕಿರಣ್ ಜೊತೆಯಾಗಿ ಕೆಲಸ ಮಾಡಿದವರು. ಆ ಹಿನ್ನೆಲೆಯಲ್ಲಿ ಗುರು ಕಿರಣ್ ಅವರು ದರ್ಶನ್ ಕುರಿತು ಪ್ರತಿಕ್ರಿಯಿಸಿದ್ದಾರೆ. ‘ಸ್ನೇಹಿತನಾಗಿ ದರ್ಶನ್ ಹೊರಗೆ ಬರಬೇಕು ಅಂತ ನಾವು ಹೇಳುತ್ತೇವೆ. ಆದರೆ ಕಾನೂನಿಗೆ ಅದರದ್ದೇ ಆದ ಪ್ರಕ್ರಿಯೆ ಇದೆ. ಪೊಲೀಸ್ನವರು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ. ದರ್ಶನ್ ತಪ್ಪು ಮಾಡಿದ್ದರೆ ಕಾನೂನು ಕ್ರಮ ಆಗಲಿ’ ಎಂದಿದ್ದಾರೆ ಗುರು ಕಿರಣ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Sep 20, 2024 06:44 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
