‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಪ್ರತಿಕ್ರಿಯೆ

Updated on: Jun 30, 2024 | 9:54 PM

‘ದರ್ಶನ್​ ನನ್ನ ಮಗು ಅಂತ ತಿಳಿದುಕೊಳ್ಳಿ. ಮಗು ತಪ್ಪು ಮಾಡಿದಾಗ ತಂದೆಗೆ ಎಷ್ಟು ನೋವಾಗುತ್ತದೋ ನನಗೆ ಅಷ್ಟು ನೋವಾಗಿದೆ. ಆ ಮಗು ಕೂಡ ಅಷ್ಟೇ ನೋವು ಅನುಭವಿಸುತ್ತಿರುತ್ತದೆ. ನಾವು ಆತ ಕೊಟ್ಟಿರುವ ಕೊಡುಗೆ ಕಡೆಗೆ ನೋಡೋಣ’ ಎಂದು ಹಂಸಲೇಖ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಆರೋಪಿ ಆಗಿದ್ದರಿಂದ ಚಂದನವನಕ್ಕೆ ಕಪ್ಪು ಚುಕ್ಕೆ ಆಗಿದೆ ಎಂಬ ಮಾತಿಗೆ ಹಂಸಲೇಖ ಅವರು ಪ್ರತಿಕ್ರಿಗೆ ನೀಡಿದ್ದಾರೆ.

ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಆ ಬಗ್ಗೆ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇಂದು (ಜೂನ್​ 30) ಮಂಡ್ಯದಲ್ಲಿ ಸಂಗೀತ ನಿರ್ದೇಶ, ಗೀತರಚನಕಾರ ‘ನಾದಬ್ರಹ್ಮ’ ಹಂಸಲೇಖ ಅವರು ಮಾತನಾಡಿದ್ದಾರೆ. ‘ಸಂಸ್ಕೃತದಲ್ಲಿ ಅತ್ಯುನ್ನತೇ ಪತನಹೇತು ಎಂಬ ಮಾತಿದೆ. ಚಂದನವನ ಎಷ್ಟು ಕೀರ್ತಿಯನ್ನು ಗಳಿಸಿತು. ಎಷ್ಟೋ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಎಂಥೆಂಥಾ ಪ್ರತಿಭಾವಂತರು ಇಲ್ಲಿ ಹುಟ್ಟಿ ಬೆಳೆದಿದ್ದಾರೆ. ಅಷ್ಟು ಎತ್ತರಕ್ಕೆ ಏರಿದ ಮೇಲೆ ಕೆಳಗೆ ಬೀಳಬೇಕಾಗುತ್ತದೆ. ಹಾಗಾಗುವುದು ಬೇಡ. ಅಲ್ಲಿಂದ ಬಿದ್ದಿದ್ದು ಕೂಡ ಮತ್ತೆ ಏಳುವ ಸಾಧ್ಯತೆ ಇದೆ. ಕೇರಳ ಚಿತ್ರೋದ್ಯಮ ಹೀಗೆಯೇ ಆಗಿತ್ತು. ಅದು ಈಗ ಉತ್ತುಂಗದಲ್ಲಿದೆ. ಅಂದರೆ, ಕೆಳಗೆ ಬಿದ್ದು, ಮೇಲೆದ್ದಿದೆ. ಒಂದು ಮಳೆಗೆ ಮರ ಒಣಗಿದರೆ ಇನ್ನೊಂದು ಮಳೆಗೆ ಕಾಡು ಬೆಳೆಯುತ್ತದೆ. ನಾವು ಸಿನಿಮಾ ಕಲಾವಿದರು. ಸಿಟ್ಟನ್ನು ಸ್ಕ್ರಿಪ್ಟ್​ ಮಾಡಬೇಕು. ದ್ವೇಷವನ್ನು ಪಾತ್ರವಾಗಿ ಮಾಡಬೇಕು. ನಿಜಜೀವನದಲ್ಲಿ ಆ ಪಾತ್ರವಾಗಬಾರದು’ ಎಂದಿದ್ದಾರೆ ಹಂಸಲೇಖ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More