ಕೊಲ್ಲೂರು ಮೂಕಾಂಬಿಕೆಗೆ 4.5 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಇಳೆಯರಾಜ

Updated on: Sep 10, 2025 | 8:35 PM

ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಕೊಲ್ಲೂರು ಮೂಕಾಂಬಿಕೆಗೆ ವಜ್ರದ ಕಿರೀಟ ಅರ್ಪಿಸಿದ್ದಾರೆ. ಅವರು ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತನಾಗಿದ್ದಾರೆ. ಈ ಹಿಂದೆಯೂ ಮೂಕಾಂಬಿಕೆಗೆ ಬಗೆಬಗೆಯ ಆಭರಣ ತೊಡಿಸಿ ಅವರು ಖುಷಿಪಟ್ಟಿದ್ದರು. ಈ ಬಾರಿ ವಜ್ರದ ಕಿರೀಟ ಸಹಿತ ಆಭರಣಗಳ ಅರ್ಪಣೆ ಮಾಡಿದ್ದಾರೆ.

ಕೊಲ್ಲೂರು ಮೂಕಾಂಬಿಕೆಗೆ (Kollur Mookambika Temple) ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ವಜ್ರದ ಕಿರೀಟ ಅರ್ಪಿಸಿದ್ದಾರೆ. ಅವರು ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತನಾಗಿದ್ದಾರೆ. ಈ ಹಿಂದೆಯೂ ಅವರು ಮೂಕಾಂಬಿಕೆಗೆ ಬಗೆಬಗೆಯ ಆಭರಣ ತೊಡಿಸಿ ಖುಷಿಪಟ್ಟಿದ್ದರು. ಈ ಬಾರಿ ವಜ್ರದ ಕಿರೀಟ (Diamond Crown) ಸಹಿತ ಆಭರಣಗಳ ಅರ್ಪಣೆ ಮಾಡಿದ್ದಾರೆ. ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಣೆ ಮಾಡಿದ್ದಾರೆ. ಆಭರಣ ಅರ್ಪಿಸುವ ಮುನ್ನ ಮೆರವಣಿಗೆ ನಡೆಯಿತು. ದೇಗುಲದ ಆಡಳಿತ ಮಂಡಳಿ ಹಾಗೂ ಅರ್ಚಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. 4.50 ಕೋಟಿ ಮೌಲ್ಯದ ಆಭರಣ ಅರ್ಪಿಸಿ ಇಳೆಯರಾಜ ಅವರು ಭಾವುಕರಾದರು. ಮೂಕಾಂಬಿಕೆಯಿಂದ ತಮ್ಮ ಜೀವನದಲ್ಲಿ ಪವಾಡ ನಡೆದಿದೆ ಎಂಬುದು ಇಳಯರಾಜ (Ilaiyaraaja) ಅವರ ನಂಬಿಕೆ. ದೇಗುಲದ ವತಿಯಿಂದ ಅವರಿಗೆ ಗೌರವಾರ್ಪಣೆ ಮಾಡಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More