‘ಮದುವೆ ಆಗದೇ ಮಕ್ಕಳು ಮಾಡಿಕೊಂಡವರು ಇದ್ದಾರೆ’; ‘ನಿನ್ನ ಸನಿಹಕೆ’ ಚಿತ್ರದ ಬಗ್ಗೆ ರಘು ದೀಕ್ಷಿತ್​ ಮಾತು

ಧನ್ಯಾ ರಾಮ್​ಕುಮಾರ್​, ಸೂರಜ್​ ಗೌಡ ಜೋಡಿಯ ‘ನಿನ್ನ ಸನಿಹಕೆ’ ಚಿತ್ರ ಅ.8ರಂದು ತೆರೆಕಾಣುತ್ತಿದೆ. ಈ ಚಿತ್ರಕ್ಕೆ ರಘು ದೀಕ್ಷಿತ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಹಾಡುಗಳು ಹಿಟ್​ ಆಗಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

‘ಮದುವೆ ಆಗದೇ ಮಕ್ಕಳು ಮಾಡಿಕೊಂಡವರು ಇದ್ದಾರೆ’; ‘ನಿನ್ನ ಸನಿಹಕೆ’ ಚಿತ್ರದ ಬಗ್ಗೆ ರಘು ದೀಕ್ಷಿತ್​ ಮಾತು
| Updated By: ಮದನ್​ ಕುಮಾರ್​

Updated on:Oct 07, 2021 | 10:02 AM

ಅ.8ರಂದು ರಿಲೀಸ್​ ಆಗುತ್ತಿರುವ ‘ನಿನ್ನ ಸನಿಹಕೆ’ ಚಿತ್ರದಲ್ಲಿ ಲಿವ್​-ಇನ್​-ರಿಲೇಷನ್​ಶಿಪ್​ ಕಥೆ ಇದೆ ಎಂಬುದು ಟ್ರೇಲರ್ ನೋಡಿದರೆ ಗೊತ್ತಾಗುತ್ತದೆ. ಲಿವ್​-ಇನ್​-ರಿಲೇಷನ್​ಶಿಪ್​ಗೆ ಕಾನೂನಿನ ಸಮ್ಮತಿ ಇದ್ದರೂ ಕೂಡ ಅದನ್ನು ನಮ್ಮ ಸಮಾಜ ಒಪ್ಪಿಕೊಂಡಿಲ್ಲ. ಅದನ್ನು ಕಾಮಿಡಿ ಮೂಲಕ ಹೇಳಲು ಈ ಸಿನಿಮಾ ಪ್ರಯತ್ನಿಸಲಿದೆ. ಈ ಚಿತ್ರಕ್ಕೆ ರಘು ದೀಕ್ಷಿತ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಬಗ್ಗೆ ಹಲವು ವಿಚಾರಗಳನ್ನು ಈ ವಿಡಿಯೋದಲ್ಲಿ ಅವರು ಹಂಚಿಕೊಂಡಿದ್ದಾರೆ.

‘ಒಂದು ವರ್ಷದಿಂದಲೂ ಒಂದೊಂದೇ ಹಾಡುಗಳನ್ನು ರಿಲೀಸ್​ ಮಾಡುತ್ತ ಬಂದಿದ್ದೇವೆ. ಶುದ್ಧ ಕನ್ನಡದಲ್ಲಿ ಹಾಡುಗಳನ್ನು ರಚಿಸಲಾಗಿದೆ. ಸಾಂಗ್ಸ್​​ ಹಿಟ್​ ಆಗಲು ವಾಸುಕಿ ವೈಭವ್​ ಅವರ ಸಾಹಿತ್ಯ ಕಾರಣ. ಎಲ್ಲ 8 ಗೀತೆಗಳಿಗೆ ಅವರು ಸಾಹಿತ್ಯ ಬರೆದಿದ್ದಾರೆ. ಗಾಯಕರು ಮತ್ತು ನನ್ನ ಇಡೀ ತಂಡಕ್ಕೆ ಕ್ರೆಡಿಟ್​ ಸಲ್ಲುತ್ತದೆ. ಸ್ಫೂರ್ತಿ ನೀಡುವಂತ ಕಥೆ ಮತ್ತು ನಿರ್ದೇಶಕರು ಇರುವಾಗ ಹಿನ್ನೆಲೆ ಸಂಗೀತಕ್ಕೆ ಕೆಲಸ ಮಾಡುವುದು ಕೂಡ ಆನಂದ ನೀಡುತ್ತದೆ’ ಎಂದು ರಘು ದೀಕ್ಷಿತ್​ ಹೇಳಿದ್ದಾರೆ.

ಇದನ್ನೂ ಓದಿ:

‘ನಿನ್ನ ಸನಿಹಕೆ’ ಚಿತ್ರ ನೋಡಲಿರುವ ರಜನಿಕಾಂತ್​; ಧನ್ಯಾ ರಾಮ್​ಕುಮಾರ್​-ಸೂರಜ್​ಗೆ ತಲೈವಾ ಬೆಂಬಲ

Ninna Sanihake: ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ನಿನ್ನ ಸನಿಹಕೆ ಚಿತ್ರತಂಡ; ಪ್ರೀಮಿಯರ್ ಶೋಗೆ ಆಹ್ವಾನ

Published On - 9:59 am, Thu, 7 October 21

Follow us
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ