ಹುಬ್ಬಳ್ಳಿ: ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿ ಭಾವೈಕ್ಯತೆ ಮೆರೆದ ಮುಸ್ಲಿಂ ಮುಖಂಡರು
ಕಲಘಟಗಿ ಗ್ರಾಮದೇವಿ ಜಾತ್ರೆ ಭಾವೈಕ್ಯತೆಗೆ ಮಾದರಿಯಾಗಿದೆ. ಜಾತ್ರೆಯಲ್ಲಿ ಭಾಗವಹಿಸಿದ ಮುಸ್ಲಿಂ ಮುಖಂಡರು ಗ್ರಾಮದೇವಿಯರಿಗೆ ಉಡಿ ತುಂಬಿದ್ದಾರೆ. ಅಷ್ಟೇ ಅಲ್ಲದೆ, ಭಕ್ತರಿಗೆ ಒಂದು ದಿನದ ಊಟದ ವ್ಯವಸ್ಥೆ ಮಾಡಿ, ತಾವೇ ಬಡಿಸಿ ಆತಿಥ್ಯ ನೀಡಿದ್ದಾರೆ. ಸದ್ಯ, ಮುಸ್ಲಿಂ ಮುಖಂಡರ ಭಾವೈಕ್ಯತೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ವಿಡಿಯೋ ಕೂಡ ವೈರಲ್ ಆಗುತ್ತಿದೆ.
ಹುಬ್ಬಳ್ಳಿ, ಮಾರ್ಚ್ 5: ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ನಡೆಯುತ್ತಿರುವ ಗ್ರಾಮದೇವಿ ಜಾತ್ರೆ ಕೋಮು ಸಾಮರಸ್ಯಕ್ಕೆ ಮಾದರಿಯಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆ ಮುಖಂಡರು ಗ್ರಾಮದೇವಿಯರಿಗೆ ಉಡಿ ತುಂಬಿದ್ದರ ಜತೆಗೆ, ಒಂದು ದಿನ ಭಕ್ತರಿಗೆ ತಾವೇ ಪ್ರಸಾದ ವ್ಯವಸ್ಥೆ ಮಾಡಿ ಭಾವೈಕ್ಯತೆ ಮೆರೆದಿದ್ದಾರೆ. ಸದ್ಯ, ಮುಸ್ಲಿಂ ಮುಖಂಡರು ಊಟದ ವ್ಯವಸ್ಥೆ ಮಾಡಿ ಭಕ್ತರಿಗೆ ಬಡಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದ್ದು, ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.
Loading...
Unable to load recommendations.
Follow Us