ಹಾವೇರಿ: ಬಕ್ರೀದ್ ಆಚರಣೆ ವೇಳೆ ಬಡಿದಾಡಿಕೊಂಡ ಮುಸ್ಲಿಂ ಯುವಕರು, ಓರ್ವ ಆಸ್ಪತ್ರೆಗೆ ದಾಖಲು

Edited By:

Updated on: Jun 29, 2023 | 11:56 AM

Haveri News: ಬಕ್ರೀದ್ ಹಬ್ಬದ ಪ್ರಯುಕ್ತ ಈದ್ಗಾ ಮೈದಾನದಲ್ಲಿ ನಡೆದ ಆಚರಣೆಯ ನಂತರ ಮುಸ್ಲಿಂ ಯುವಕರು ಬಡಿದಾಡಿಕೊಂಡ ಘಟನೆ ನಡೆದಿದೆ.

ಹಾವೇರಿ: ಬಕ್ರೀದ್ (Bakrid) ಹಬ್ಬದ ಪ್ರಯುಕ್ತ ಈದ್ಗಾ ಮೈದಾನದಲ್ಲಿ (Idgah Maidan) ನಡೆದ ಆಚರಣೆಯ ನಂತರ ಅಂಜುಮನ್ ಕಮಿಟಿ ಲೆಕ್ಕಪತ್ರ ನಿರ್ವಹಣೆ ವಿಚಾರವಾಗಿ ಮುಸ್ಲಿಂ ಯುವಕರು ಬಡಿದಾಡಿಕೊಂಡ ಘಟನೆ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ನಡೆದಿದೆ. ಈದ್ಗಾ ಮೈದಾನದ ನಿರ್ವಹಣೆಗಾಗಿ ವಂತಿಕೆ ಸಂಗ್ರಹ ವೇಳೆ ಯುವಕರ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಘಟನೆಯಲ್ಲಿ ಮುಸ್ತಕಾಅಹ್ಮದ್ ಖಾಜಿ ಎಂಬವನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿರಾರು ಜನರು ಸೇರಿ ಸಾಮೂಹಿಕ ಪ್ರಾರ್ಥನೆ ನಡೆಸಿದ ನಂತರ ಈ ಗಲಾಟೆ ನಡೆದಿದೆ. ಸ್ಥಳಕ್ಕೆ ರಟ್ಟಿಹಳ್ಳಿ ಪೊಲೀಸರು ಆಗಮಿಸಿದ ಬಳಿಕ ಪರಿಸ್ಥಿತಿ ಶಾಂತವಾಗಿದೆ.

ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Jun 29, 2023 11:56 AM
Follow Us
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More