ಮುಸ್ಲಿಮರಿಂದ ಗಣೇಶನಿಗೆ ವಿಶೇಷ ಪೂಜೆ: ಸದೃಢ ಭಾರತ ನಿರ್ಮಾಣಕ್ಕೆ ಕರೆ

Updated on: Aug 27, 2025 | 5:49 PM

ಕೊಳ್ಳೇಗಾಲ ಪಟ್ಟಣದ ರಾಮ ಮಂದಿರ ಬಳಿ ಪ್ರತಿಷ್ಠಾಪನೆ ಮಾಡಲಾಗಿರುವ ಗಣೇಶ ಕೋಮು ಸೌಹಾರ್ದ ಬ್ರಾತೃತ್ವಕ್ಕೆ ಸಾಕ್ಷಿಯಾಗಿದೆ. ಕೊಳ್ಳೇಗಾಲದಲ್ಲಿ ರಾಘವನ್ ಗುರೂಜಿ ಪ್ರತಿಷ್ಠಾಪನೆ ಮಾಡಿರುವ ಗಣೇಶನಿಗೆ ನಿಸಾರ್ ಅಹಮ್ಮದ್ ಹಾಗೂ ಸಂಗಡಿಗರು ಪೂಜೆ ಸಲ್ಲಿಸಿದರು. ಈ ವೇಳೆ ಸಿಹಿ ಹಂಚಿ ಹಬ್ಬವನ್ನು ಆಚರಿಸಿ ಸಂಭ್ರಮಿಸಿದರು. ಇಲ್ಲಿ ಮುಸಲ್ಮಾನರು ತಮ್ಮ ತಾತ ಮುತ್ತಾತ ಕಾಲದಿಂದಲು ಗಣೇಶ ಚತುರ್ಥಿ ಆಚರಿಸಿಕೊಂಡು ಬಂದಿರುವುದು ವಿಶೇಷ.

ಚಾಮರಾಜನಗರ, (ಆಗಸ್ಟ್ 27): ಕೊಳ್ಳೇಗಾಲ ಪಟ್ಟಣದ ರಾಮ ಮಂದಿರ ಬಳಿ ಪ್ರತಿಷ್ಠಾಪನೆ ಮಾಡಲಾಗಿರುವ ಗಣೇಶ ಕೋಮು ಸೌಹಾರ್ದ ಬ್ರಾತೃತ್ವಕ್ಕೆ ಸಾಕ್ಷಿಯಾಗಿದೆ. ಕೊಳ್ಳೇಗಾಲದಲ್ಲಿ ರಾಘವನ್ ಗುರೂಜಿ ಪ್ರತಿಷ್ಠಾಪನೆ ಮಾಡಿರುವ ಗಣೇಶನಿಗೆ ನಿಸಾರ್ ಅಹಮ್ಮದ್ ಹಾಗೂ ಸಂಗಡಿಗರು ಪೂಜೆ ಸಲ್ಲಿಸಿದರು. ಈ ವೇಳೆ ಸಿಹಿ ಹಂಚಿ ಹಬ್ಬವನ್ನು ಆಚರಿಸಿ ಸಂಭ್ರಮಿಸಿದರು. ಇದೇ ವೇಳೆ ಮಾತನಾಡಿದ ಮುಸ್ಲಿಂ ಮುಖಂಡ, ಜಾತಿ ಧರ್ಮವನ್ನು ಬಿಟ್ಟು ಬಲಿಷ್ಠ ಭಾರತ ನಿರ್ಮಾಣಕ್ಕೆ ಕರೆ ನೀಡಿದರು. ಇನ್ನು ಇಲ್ಲಿ ಮುಸಲ್ಮಾನರು ತಮ್ಮ ತಾತ ಮುತ್ತಾತ ಕಾಲದಿಂದಲು ಗಣೇಶ ಚತುರ್ಥಿ ಆಚರಿಸಿಕೊಂಡು ಬಂದಿರುವುದು ವಿಶೇಷ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More