‘ನನ್ನ ಮಗಳು ವಿದ್ಯಾವಂತೆ, ಅವಳಿಗೆ ದುಡಿದು ತಿನ್ನೋ ತಾಕತ್ತಿದೆ’; ಯುವ ಮಾವ ಭೈರಪ್ಪ ಮಾತು

Updated on: Jun 11, 2024 | 8:21 AM

ಶ್ರೀದೇವಿಗೆ ಅನೈತಿಕ ಸಂಬಂಧ ಇತ್ತು, ಅವರು ರಾಜ್​ಕುಮಾರ್ ಅಕಾಡೆಮಿಯಲ್ಲಿ ಅವ್ಯವಹಾರ ನಡೆಸಿದ್ದಾಗಿ ಯುವ ಪರ ವಕೀಲರು ಆರೋಪಿಸಿದ್ದಾರೆ. ಆದರೆ, ಇದನ್ನು ಶ್ರೀದೇವಿ ಅಲ್ಲಗಳೆದಿದ್ದಾರೆ. ಈ ಮಧ್ಯೆ ಶ್ರೀದೇವಿ ತಂದೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.

ಯುವ ಹಾಗೂ ಶ್ರೀದೇವಿ (Sridevi) ಅವರ ವಿಚ್ಛೇದನ ವಿಚಾರ ಎಲ್ಲ ಕಡೆ ಚರ್ಚೆ ಆಗುತ್ತಿದೆ. ಶ್ರೀದೇವಿಗೆ ಅನೈತಿಕ ಸಂಬಂಧ ಇತ್ತು, ಅವರು ರಾಜ್​ಕುಮಾರ್ ಅಕಾಡೆಮಿಯಲ್ಲಿ ಅವ್ಯವಹಾರ ನಡೆಸಿದ್ದಾಗಿ ಯುವ ಪರ ವಕೀಲರು ಆರೋಪಿಸಿದ್ದಾರೆ. ಆದರೆ, ಇದನ್ನು ಶ್ರೀದೇವಿ ಅಲ್ಲಗಳೆದಿದ್ದಾರೆ. ಈ ಮಧ್ಯೆ ಶ್ರೀದೇವಿ ತಂದೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ‘ಅವರ ಕುಟುಂಬದವರು ಕೆಟ್ಟ ಮಾತಾಡ್ತಾರೆ ಎಂದು ನನಗೆ ಅವಳು ಯಾವಾಗಲೂ ಹೇಳಿಲ್ಲ. ನಾವು ದೊಡ್ಮನೆ ಅನ್ನೋ ಕಾರಣಕ್ಕೆ ಮದುವೆ ಮಾಡಿಕೊಟ್ಟಿಲ್ಲ. ನನ್ನ ಮಗಳು ವಿದ್ಯಾವಂತೆ, ದುಡಿದು ತಿನ್ನೋ ತಾಕತ್ತಿದೆ ಅಂತ ಮದುವೆ ಮಾಡಿಕೊಟ್ಟಿದ್ದು. ಆತ ಎಸ್​ಎಸ್​ಎಲ್​ಸಿ. ಆದರೂ ಮದುವೆ ಮಾಡಿಕೊಟ್ಟೆ’ ಎಂದು ಅವರು ಹೇಳಿದ್ದಾರೆ. ಹೆಚ್ಚಿನ ವಿಧ್ಯಾಭ್ಯಾಸಕ್ಕೆ ಶ್ರೀದೇವಿ ಅಮೆರಿಕ ತೆರಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More