ನನ್ನ ಮಗಳು ವರ್ಷಿತಾಳ ಹಂತಕರನ್ನು ಗಲ್ಲಿಗೇರಿಸಬೇಕು: ಜ್ಯೋತಿ ತಿಪ್ಪೇಸ್ವಾಮಿ, ವರ್ಷಿತಾ ತಾಯಿ

ಅರುಣ್​ ಕುಮಾರ್​ ಬೆಳ್ಳಿ

Updated on: Aug 20, 2025 | 11:56 AM

ತನ್ನ ಮಗಳಿಗೆ ಬಂದ ಸ್ಥಿತಿ ಯಾರಿಗೂ ಬರೋದು ಬೇಡ, ಹರೆಯದ ಹೆಣ್ಣುಮಕ್ಕಳನ್ನು ಕಾಲೇಜು ಮತ್ತು ಹಾಸ್ಟೆಲ್ ಸಿಬ್ಬಂದಿ ಮುತುವರ್ಜಿಯಿಂದ ನೋಡಿಕೊಳ್ಳಬೇಕು ಎಂದು ಜ್ಯೋತಿ ಗೋಳಾಡುತ್ತಿದ್ದಾರೆ. ಹಾಸ್ಟೆಲ್​ನಲ್ಲಿರುವ ಬೇರೆ ಯುವತಿಯರು ಜ್ಯೋತಿ ಅವರಿಗೆ ನೀಡಿರುವ ಮಾಹಿತಿ ಪ್ರಕಾರ ಚಿತ್ರದುರ್ಗ ಚೇತನ್ ಎನ್ನುವವನು ವರ್ಷಿತಾಳನ್ನು ಭೇಟಿಯಾಗಲು ಬಂದಿದ್ದನಂತೆ. ಆದರೆ ಕೊಲೆ ಕೇವಲ ಒಬ್ಬನಿಂದ ನಡೆದಿಲ್ಲ ಎಂದು ಹೇಳಲಾಗುತ್ತಿದೆ.

ಚಿತ್ರದುರ್ಗ, ಆಗಸ್ಟ್ 20: ಇದ್ದೊಬ್ಬಳೇ ಮಗಳನ್ನು ಕಳೆದುಕೊಂಡು ತಾಯಿ ಜ್ಯೋತಿ ತಿಪ್ಪೇಸ್ವಾಮಿ (Jyoti Tippe Swamy) ಅನುಭವಿಸುತ್ತಿರುವ ವೇದನೆ ಮತ್ತು ಯಾತನೆ ಅರ್ಥವಾಗುತ್ತದೆ. ದುರ್ಗದ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಪದವಿ ಓದುತ್ತಿದ್ದ ಅವರ ಮಗಳು 19-ವರ್ಷದ ವರ್ಷಿತಾಳನ್ನು (Varshita) ಕೊಲೆ ಮಾಡಿರುವ ಕೆಲ ದುರುಳರು ಆಕೆಯ ಗುರುತು ಸಿಗದಿರಲೆಂದು ಬೆಂಕಿಹಚ್ಚಿ ಸುಡುವ ಪ್ರಯತ್ನ ಕೂಡ ಮಾಡಿದ್ದಾರೆ. ಮೊನ್ನೆ ರಾತ್ರಿ ಜ್ಯೋತಿ, ದುರ್ಗದ ಹಾಸ್ಟೆಲೊಂದರಲ್ಲಿದ್ದ ಮಗಳಿಗೆ ಫೋನ್ ಮಾಡಿದ್ದಾರೆ, ಆದರೆ ವರ್ಷಿತಾ ಅಮ್ಮ ಅಂತ ಮಾತ್ರ ಹೇಳಿದಳಂತೆ. ಗಾಬರಿಗೊಂಡು ಅವರು ನಗರಕ್ಕೆ ಬಂದು ಹಾಸ್ಟೆಲ್ ಹೋದಾಗ ಮಗಳು ಕಣ್ಮರೆಯಾಗಿರುವ ವಿಷಯ ಗೊತ್ತಾಗಿದೆ. ಮತ್ತಷ್ಟು ಆತಂಕಗೊಂಡ ಅವರು ಪೊಲೀಸ್ ದೂರು ದಾಖಲಿಸಿದಾಗ ವರ್ಷಿತಾ ಕೊಲೆಯಾಗಿದ್ದು ತಿಳಿದು ಬಂದಿದೆ. ಹಂತಕರನ್ನು ಗಲ್ಲಿಗೇರಿಸಬೇಕೆಂದು ಜ್ಯೋತಿ ಹೇಳುತ್ತಾರೆ.

ಇದನ್ನೂ ಓದಿ:  ಪ್ರೇಯಸಿ ಒತ್ತಡಕ್ಕೆ ಪತ್ನಿಯನ್ನು ಕೊಲೆಗೈದ ಬಿಜೆಪಿ ನಾಯಕ ರೋಹಿತ್ ಸೈನಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.