ನನ್ನ ಕ್ಷೌರಿಕ ಫ್ರೀ ಇಲ್ಲ, ವಿಜಯೇಂದ್ರನೇ ಬಂದು ಹೇರ್ ಕಟ್ ಮಾಡಲಿ: ಮಧು ಬಂಗಾರಪ್ಪ, ಶಿಕ್ಷಣ ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: May 27, 2024 | 1:47 PM

ಹಿಂದಿನ ಬಿಜೆಪಿ ಸರ್ಕಾರ ಪಠ್ಯಪುಸ್ತಕಗಳನ್ನು ಹೊಲಸೆಬ್ಬಿಸಿದ್ದ ಕಾರಣ ಅವುಗಳ ಪಾವಿತ್ರ್ಯತೆ ಹಾಳಾಗಿತ್ತು, ಎಲ್ಲವನ್ನು ಸ್ವಚ್ಛಗೊಳಿಸುವ ಕೆಲಸ ತಮ್ಮ ಇಲಾಖೆ ಮಾಡುತ್ತಿದೆ ಎಂದು ಸಚಿವ ಹೇಳಿದರು. ಶಾಲಾಮಕ್ಕಳ ಭವಿಷ್ಯ ಮತ್ತು ಅವರ ಹಿತಾಸಕ್ತಿಯ ದೃಷ್ಟಿಯಿಂದ ಕೆಲ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು

ಚಿತ್ರದುರ್ಗ: ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಾಗಿ ಪ್ರಚಾರ ಮಾಡಲು ಚಿತ್ರದುರ್ಗಕ್ಕೆ ಆಗಮಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಮ್ಮ ಕೇಶ ವಿನ್ಯಾಸದ ಮೇಲೆ ಕಾಮೆಂಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ (BY Vijayendra) ತಿರುಗೇಟು ನೀಡಿದರು. ಶಿಕ್ಷಣ ಸಚಿವ (education minister) ಇನ್ನೂ ಸಿನಿಮಾ ಭ್ರಮೆಯಲ್ಲಿದ್ದಾರೆ, ಮೊದಲು ಹೇರ್ ಕಟಿಂಗ್ ಮಾಡಿಸಿಕೊಳ್ಳಲಿ ಎಂದ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಮಧು ಬಂಗಾರಪ್ಪ, ನನ್ನ ಹೇರ್ ಕಟ್ ಮಾಡುವವರು ಫ್ರೀ ಇಲ್ಲ, ವಿಜಯೇಂದ್ರನೇ ಬಂದು ಮಾಡಲಿ ಎಂದರು. ಮುಂದುವರಿದು ಮಾತಾಡಿದ ಅವರು ಹಿಂದಿನ ಬಿಜೆಪಿ ಸರ್ಕಾರ ಪಠ್ಯಪುಸ್ತಕಗಳನ್ನು ಹೊಲಸೆಬ್ಬಿಸಿದ್ದ ಕಾರಣ ಅವುಗಳ ಪಾವಿತ್ರ್ಯತೆ ಹಾಳಾಗಿತ್ತು, ಎಲ್ಲವನ್ನು ಸ್ವಚ್ಛಗೊಳಿಸುವ ಕೆಲಸ ತಮ್ಮ ಇಲಾಖೆ ಮಾಡುತ್ತಿದೆ ಎಂದು ಸಚಿವ ಹೇಳಿದರು. ಶಾಲಾಮಕ್ಕಳ ಭವಿಷ್ಯ ಮತ್ತು ಅವರ ಹಿತಾಸಕ್ತಿಯ ದೃಷ್ಟಿಯಿಂದ ಕೆಲ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ ಮಧು ಬಂಗಾರಪ್ಪ, ಬಿಜೆಪಿ ಸರ್ಕಾರಕ್ಕೆ ಶಿಕ್ಷಕರ ನೇಮಕಾತಿ ಮಾಡುವುದು ಸಹ ಸಾಧ್ಯವಾಗಿರಲಿಲ್ಲ, ಅದನ್ನು ತಮ್ಮ ಸರ್ಕಾರ ಮಾಡಬೇಕಾಯಿತು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ಇದನ್ನೂ ಓದಿTextbooks Revision; ಬಿಜೆಪಿ ಸರ್ಕಾರ ತೆಗೆದುಹಾಕಿದ್ದ ಪಾಠಗಳನ್ನು ವಾಪಸ್ಸು ಸೇರಿಸಲಾಗಿದೆ: ಮಧು ಬಂಗಾರಪ್ಪ, ಶಿಕ್ಷಣ ಸಚಿವ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.