My India My Life Goals: ಭವಿಷ್ಯಕ್ಕಾಗಿ ಅಂತರ್ಜಲ ಉಳಿಸುವುದು ಅನಿವಾರ್ಯ

Updated on: Aug 09, 2023 | 6:37 PM

My India My Life Goals: ಭೂಮಿಯ ಮೇಲಿನ ಅಂತರ್ಜಲ ಮಟ್ಟವು ವೇಗವಾಗಿ ಕಡಿಮೆಯಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ನೀರನ್ನು ಉಳಿಸುವುದು ಅನಿವಾರ್ಯ.

ಪ್ರಪಂಚದಾದ್ಯಂತ ವೇಗವಾಗಿ ಹದಗೆಡುತ್ತಿರುವ ಪರಿಸರದಿಂದಾಗಿ ಸಾಮಾನ್ಯ ಜನರ ಜೀವನ ಮಟ್ಟವು ಸಂಕಷ್ಟದಲ್ಲಿದೆ. ಜನರು ಜೀವನೋಪಾಯಕ್ಕಾಗಿ ಸಾಕಷ್ಟು ಕಷ್ಟಪಡಬೇಕಾಗಿದೆ. ಭೂಮಿಯ ಮೇಲಿನ ಅಂತರ್ಜಲ ಮಟ್ಟವು ವೇಗವಾಗಿ ಕಡಿಮೆಯಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ನೀರನ್ನು ಉಳಿಸುವುದು ಅನಿವಾರ್ಯ. ಮುಂಬರುವ ದಿನಗಳಲ್ಲಿ ನೀರಿನ ಬೇಡಿಕೆ ವೇಗವಾಗಿ ಹೆಚ್ಚುತ್ತಿದ್ದು, 2050ರ ವೇಳೆಗೆ ನೀರಿನ ಬೇಡಿಕೆ ಶೇ.55ರಷ್ಟು ಹೆಚ್ಚಾಗಲಿದೆ. ಶಾಲೆ, ಕಾಲೇಜು, ಕಚೇರಿಗಳಲ್ಲಿ ನೀರು ಉಳಿಸಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಪರಿಸರ ಸಂರಕ್ಷಣೆಯ ಅಭಿಯಾನದಡಿಯಲ್ಲಿ ಅಂತರ್ಜಲ ಉಳಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದೆ. ನನ್ನ ಭಾರತ ನನ್ನ ಜೀವನದ ಗುರಿ ಅಭಿಯಾನ ನಡೆಸುತ್ತಿದೆ. ಇದಕ್ಕೆ ಟಿವಿ9 ಕೈಜೋಡಿಸಿದೆ.

Published on: Aug 09, 2023 02:50 PM
Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More