ಸಿದ್ದರಾಮಯ್ಯನವರಿಗೆ ತಗುಲಿದ ಕಳಂಕ ಹೋಗಲಾಡಿಸಲು ತಾಯಿಯವರು ಸೈಟು ವಾಪಸ್ಸು ಕೊಟ್ಟಿದ್ದು: ಯತೀಂದ್ರ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Mar 08, 2025 | 4:19 PM

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ, ದೇಶದ ಯಾವುದೇ ಮುಖ್ಯಮಂತ್ರಿ ಆಥವಾ ಹಣಕಾಸು ಸಚಿವ ಮಾಡದ ದಾಖಲೆ ಅವರ ಹೆಸರಿಗಾಗಿದೆ, ಶಾಸಕರು ಮತ್ತು ಹೈಕಮಾಂಡ್ ಅವರ ಪರವಾಗಿ ಇರೋದ್ರಿಂದ 5 ವರ್ಷ ಅವರೇ ಸಿಎಂ ಆಗಿ ಮುಂದುವರಿದು 19 ನೇ ಬಜೆಟ್ ಕೂಡ ಮಂಡಿಸಲಿದ್ದಾರೆ ಎಂದು ಯತೀಂದ್ರ ಹೇಳಿದರು.

ಮೈಸೂರು, ಮಾರ್ಚ್ 8: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ಕುಟುಂಬದಿಂದ ಯಾವುದೇ ಅವ್ಯವಹಾರ ನಡೆದಿಲ್ಲವೆಂದು ಲೋಕಾಯುಕ್ತ (Lokayukta) ದೃಢಪಡಿಸಿದೆ, ಕುಟುಂಬದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿತ್ತು ಎಂದು ಎಮ್ಮೆಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಪ್ರಕರಣದಲ್ಲಿ ಜಾರಿ ನಿರ್ದೇಶನಾಯ ಪ್ರವೇಶಿಸುವ ಅಗತ್ಯವಿರಲಿಲ್ಲ, ಮನಿ ಲಾಂಡ್ರಿಂಗ್ ನಡೆದಲ್ಲಿ ಮಾತ್ರ ಇಡಿ ತನಿಖೆ ಮಾಡಬಹುದು, ರಾಜಕೀಯ ದುರುದ್ದೇಶ ಮತ್ತು ಕೇಂದ್ರ ಸರ್ಕಾರದ ಕುಮ್ಮಕ್ಕಿನಿಂದ ಅದು ತನಿಖೆ ನಡೆಸಲು ಮುಂದಾಗಿತ್ತು ಎಂದು ಯತೀಂದ್ರ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಯತೀಂದ್ರ ಸಿದ್ದರಾಮಯ್ಯ ನಮ್ಮ ವರಿಷ್ಠರ ವಿರುದ್ಧ ಕಾಮೆಂಟ್ ಮಾಡೋದು ಬಿಟ್ಟು ತಮ್ಮ ತಂದೆಯ ಬಗ್ಗೆ ಮಾತಾಡಲಿ: ಡಿವಿ ಸದಾನಂದಗೌಡ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.