ನನ್ನ ಸಾರ್ವಜನಿಕ ಬದುಕು ಆರಂಭಗೊಂಡಿದ್ದೇ ಕಾಂಗ್ರೆಸ್ ಪಕ್ಷದಿಂದ: ಸಿಪಿ ಯೋಗೇಶ್ವರ್

|

Updated on: Oct 23, 2024 | 7:32 PM

ಎಲ್ಲ ನಿರ್ಧಾರಗಳನ್ನು ಸಾಕಷ್ಟು ಯೋಚಿಸಿ ತೆಗೆದುಕೊಂಡಿರುವುದಾಗಿ ಹೇಳಿದ ಯೋಗೇಶ್ವರ್, ನಾಳೆ ತಾನು ನಾಮಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಹಲವಾರು ಪ್ರಮುಖ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಸಲ್ಲಿಸುವುದಾಗಿ ಹೇಳಿದರು.

ರಾಮನಗರ: ಚನ್ನಪಟ್ಟಣದ ಕಾಂಗ್ರೆಸ್ ಕಚೇರಿಗೆ ಹಲವಾರು ವರ್ಷಗಳ ನಂತರ ಆಗಮಿಸಿದ ಸಿಪಿ ಯೋಗೇಶ್ವರ್ ಅವರಿಗೆ ಸಿಕ್ಕಿದ್ದು ಭರ್ಜರಿ ಸ್ವಾಗತ. ನಮ್ಮ ವರದಿಗಾರನೊಂದಿಗೆ ಮಾತಾಡಿದ ಅವರು, ತನ್ನ ಸಾರ್ವಜನಿಕ ಬದುಕು ಆರಂಭವಾಗಿದ್ದೇ ಕಾಂಗ್ರೆಸ್ ಪಕ್ಷದಿಂದ, ದಶಕಗಳ ನಂತರ ಕಾಂಗ್ರೆಸ್​ಗೆ ವಾಪಸ್ಸಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ, ತಾಲ್ಲೂಕಿನ ಜನ ತನ್ನನ್ನು ಗೆಲ್ಲಿಸುವ ವಿಶ್ವಾಸವಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಕುಮಾರಸ್ವಾಮಿ ಹಠ ಮಾಡದಿದ್ದರೆ ಯೋಗೇಶ್ವರ್ ಪಕ್ಷಬಿಟ್ಟು ಹೋಗುತ್ತಿರಲಿಲ್ಲ: ಪ್ರೀತಂ ಗೌಡ   

Follow us on