ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆ ರಾಜಕೀಯಕ್ಕೆ ಮಿಗಿಲಾದ ಬಾಂಧವ್ಯವಿದೆ: ಎಂಪಿ ರೇಣುಕಾಚಾರ್ಯ, ಬಿಜೆಪಿ ನಾಯಕ

ವಿಧಾನ ಸಭಾ ಚುನಾವಣೆಯಲ್ಲಿ ಸೋತಿದ್ದರೂ, ಕ್ಷೇತ್ರಕ್ಕಾಗಿ ದುಡಿಯುವುದನ್ನು ಮುಂದುವರಿಸಿರುವುದಾಗಿ ಹೇಳಿದ ಅವರು, ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ, ವರಿಷ್ಠರು ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದರು.

ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆ ರಾಜಕೀಯಕ್ಕೆ ಮಿಗಿಲಾದ ಬಾಂಧವ್ಯವಿದೆ: ಎಂಪಿ ರೇಣುಕಾಚಾರ್ಯ, ಬಿಜೆಪಿ ನಾಯಕ
|

Updated on: Aug 26, 2023 | 7:25 PM

ದಾವಣಗೆರೆ: ನಿನ್ನೆ (ಶುಕ್ರವಾರ) ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರನ್ನು (DK Shivakumar) ಅವರ ನಿವಾಸದಲ್ಲಿ ಭೇಟಿಯಾಗಿ ರಾಜಕೀಯ ವಲಯದಲ್ಲಿ ಬಹಳಷ್ಟು ಕುತೂಹಲ ಮೂಡಿಸಿದ್ದ ಹೊನ್ನಾಳಿಯ ಮಾಜಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ಇಂದು ತಮ್ಮ ಸ್ವಕ್ಷೇತ್ರದಲ್ಲಿ ಭೇಟಿಯ ಕಾರಣ ಹೇಳಿದರು. ಶಿವಕುಮಾರ್ ಮತ್ತು ಸಿದ್ದರಾಮಯ್ಯ (Siddaramaiah) ಜೊತೆ ರಾಜಕೀಯಕ್ಕೆ ಮೀರಿದ ಬಾಂಧವ್ಯ ಇದೆ, ಹೊನ್ನಾಳಿಯಲ್ಲಿ ತಾವು ಆಯೋಜಿಸಿದ ಕಾರ್ಯಕ್ರಮಗಳಲ್ಲಿ ಅವರಿಬ್ಬರು ಭಾಗಿಯಾಗಿದ್ದಾರೆ. ವಿಧಾನಸಭೆಯಲ್ಲಿ 135 ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ ಗೆ ತನ್ನ ಅವಶ್ಯಕತೆಯಿಲ್ಲ ಎಂದು ರೇಣುಕಾಚಾರ್ಯ ಹೇಳಿದರು. ಚುನಾವಣೆಯಲ್ಲಿ ಸೋತಿದ್ದರೂ, ಕ್ಷೇತ್ರಕ್ಕಾಗಿ ದುಡಿಯುವುದನ್ನು ಮುಂದುವರಿಸಿರುವುದಾಗಿ ಹೇಳಿದ ಅವರು, ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ, ವರಿಷ್ಠರು ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us