ಸೂರ್ಯನ ಕಿರಣದ ಮೂಲಕ ಅಯೋಧ್ಯೆ ರಾಮಮಂದಿರದ ಚಿತ್ರ ಬಿಡಿಸಿದ ಮೈಸೂರು ಕಲಾವಿದ

Edited By:

Updated on: Jan 20, 2024 | 3:07 PM

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿದ್ದು, ರಾಮಲಲ್ಲಾ (ಬಾಲ ರಾಮ)ನ ಮೂರ್ತಿ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದೆ. ದೇಶದಾದ್ಯಂತ ಸಡಗರ, ಸಂಭ್ರಮ ಮುಗಿಲು‌ ಮುಟ್ಟಿದೆ. ಈ ಮಧ್ಯೆ ಪ್ರಭು ಶ್ರೀರಾಮಚಂದ್ರನಿಗೆ ಭಕ್ತರು ವಿವಿಧ ರೀತಿಯಲ್ಲಿ ತಮ್ಮ ಭಕ್ತಿಯನ್ನು ಸಮರ್ಪಿಸುತ್ತಿದ್ದಾರೆ. ಅದೇ ರೀತಿಯಾಗಿ ಮೈಸೂರಿನ ಕಲಾವಿದ ಶ್ಯಾಮ್​ ಸೂರ್ಯ ಕಿರಣ ಬಳಿಸಿಕೊಂಡು ಅಯೋಧ್ಯೆ ರಾಮಮಂದಿರದ ಚಿತ್ರ ಬಿಡಿಸಿದ್ದಾರೆ.

ಮೈಸೂರು, ಜನವರಿ 20: ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ (Ram Mandir) ನಿರ್ಮಾಣವಾಗಿದ್ದು, ರಾಮಲಲ್ಲಾ (ಬಾಲ ರಾಮ)ನ ಮೂರ್ತಿ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದೆ. ದೇಶದಾದ್ಯಂತ ಸಡಗರ, ಸಂಭ್ರಮ ಮುಗಿಲು‌ ಮುಟ್ಟಿದೆ. ಈ ಮಧ್ಯೆ ಪ್ರಭು ಶ್ರೀರಾಮಚಂದ್ರನಿಗೆ ಭಕ್ತರು ವಿವಿಧ ರೀತಿಯಲ್ಲಿ ತಮ್ಮ ಭಕ್ತಿಯನ್ನು ಸಮರ್ಪಿಸುತ್ತಿದ್ದಾರೆ. ಅದೇ ರೀತಿಯಾಗಿ ಮೈಸೂರಿನ ಕಲಾವಿದ ಶ್ಯಾಮ್​ ಸೂರ್ಯ ಕಿರಣ ಬಳಿಸಿಕೊಂಡು ಅಯೋಧ್ಯೆ ರಾಮಮಂದಿರದ ಚಿತ್ರ ಬಿಡಿಸಿದ್ದಾರೆ. ಬೂದು ಗಾಜಿನ ಮೂಲಕ ಸೂರ್ಯನ ಕಿರಣ ಹಾಯಿಸಿ ಚಿತ್ರ ದಪ್ಪನೆಯ ಹಾಳೆಯ ಮೇಲೆ ಚಿತ್ರ ಬಿಡಿಸಿದ್ದಾರೆ. ಈ ಚಿತ್ರವನ್ನು ಬಿಡಿಸಲು ಶ್ಯಾಮ್​ ಕಳೆದ ಮೂರು ದಿನಗಳಿಂದ ಅಭ್ಯಾಸ ಮಾಡಿದ್ದಾರೆ. ಶ್ಯಾಮ್​ ಕಳೆದ 6 ವರ್ಷಗಳಿಂದ ಈ ಕಲೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇಂದು (ಜ.20) ಮೈಸೂರು ಅರಮನೆಯ ಕೋಟೆ ಆಂಜನೇಯ ದೇಗುಲದ ಬಳಿ ಚಿತ್ರ ಬಿಡಿಸಿದ್ದಾರೆ.

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More