ಮೈಸೂರು: ಇಂದಿನಿಂದ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವ ಆರಂಭ; ಸಿಎಂ ಸೇರಿ ಹಲವು ಗಣ್ಯರು ಭಾಗಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 18, 2023 | 9:19 AM

ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ 2 ವರ್ಷಗಳ ನಂತರ ಅದ್ಧೂರಿ ಜಾತ್ರೆ ಹಮ್ಮಿಕೊಳ್ಳಲಾಗಿದ್ದು, ಸಿಎಂ ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ.

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ 2 ವರ್ಷಗಳ ಬಳಿಕ ಅದ್ಧೂರಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಸಂಗೀತ, ಕಲೆ, ಕ್ರೀಡೆ, ಕೃಷಿಮೇಳ ಸೇರಿದಂತೆ ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಬಾರಿ ಚರ್ಮಗಂಟು ರೋಗ ಹಿನ್ನೆಲೆ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಹಸುಗಳ ಜಾತ್ರೆಯನ್ನ ರದ್ದು ಮಾಡಲಾಗಿದೆ. ಕಳೆದ 53 ವರ್ಷದಿಂದ ನಡೆದುಕೊಂಡು ಬಂದಿದ್ದ ಹಸುಗಳ ಜಾತ್ರೆ ಈ ಬಾರಿ ಇಲ್ಲದಂತಾಗಿದೆ. ಸುತ್ತೂರು ಜಾತ್ರೆಗೆ ಸುಮಾರು 10 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು. ನಿತ್ಯವೂ ಸುತ್ತೂರು ಮಠದಲ್ಲಿ 2 ಲಕ್ಷ ಜನರಿಗೆ ಅನ್ನ ದಾಸೋಹ ನಡೆಯಲಿದೆ. ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸಿಎಂ, ಸಚಿವರು ಸೇರಿ ಹಲವು ಗಣ್ಯರು ಭಾಗಿಯಾಗುವ ಹಿನ್ನಲೆ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೈಸೂರು ಎಸ್​​ಪಿ ಸೀಮಾ ಲಾಟ್ಕರ್ ಸುತ್ತೂರು ಮಠಕ್ಕೆ ಭೇಟಿ ನೀಡಿ ​​ಭದ್ರತೆ ಪರಿಶೀಲನೆ ಮಾಡಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us on