ಮೈಸೂರು: ಆಶ್ರಯ ಯೋಜನೆಗೆ ಮಂಜೂರಾಗಿದ್ದ ಜಮೀನು ಒತ್ತುವರಿ, ತಹಶೀಲ್ದಾರ್ ನೇತೃತ್ವದಲ್ಲಿ ತೆರವು

Edited By:

Updated on: Aug 20, 2023 | 10:26 AM

ಮೈಸೂರಿನಲ್ಲಿ ಆಶ್ರಯ ಯೋಜನೆಗಾಗಿ ಮಂಜೂರಾಗಿದ್ದ ಸರ್ಕಾರಿ ಗೋಮಾಳವನ್ನು ಒತ್ತುವರಿ ಮಾಡಿಕೊಮಡು ಹಸುವಿನ ಕೊಟ್ಟಿಗೆ ಕಟ್ಟಲಾಗಿದೆ. ತಹಶೀಲ್ದಾರ್ ಟಿ.ಎನ್.ಗಿರೀಶ್ ತೆರವು ಕಾರ್ಯಾಚರಣೆ ನಡೆಸುತ್ತಿದ್ದು ಹಸುವಿನ ಕೊಟ್ಟಿಗೆ ನೆಲಸಮ ಮಾಡಲಾಗಿದೆ.

ಮೈಸೂರು, ಆ.20: ಆಶ್ರಯ ಯೋಜನೆಗೆ ಮಂಜೂರಾಗಿದ್ದ ಜಮೀನು ಒತ್ತುವರಿ ಹಿನ್ನೆಲೆ ಮೈಸೂರು ತಾಲೂಕು ತಹಶೀಲ್ದಾರ್ ಟಿ.ಎನ್.ಗಿರೀಶ್(TN Girish) ನೇತೃತ್ವದಲ್ಲಿ ಆನಂದೂರಿನಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಆಶ್ರಯ ಯೋಜನೆಗಾಗಿ ಮಂಜೂರಾಗಿದ್ದ ಸರ್ಕಾರಿ ಗೋಮಾಳವನ್ನು ಒತ್ತುವರಿ ಮಾಡಿಕೊಮಡು ಹಸುವಿನ ಕೊಟ್ಟಿಗೆ ಕಟ್ಟಲಾಗಿದೆ. ತಹಶೀಲ್ದಾರ್ ಟಿ.ಎನ್.ಗಿರೀಶ್ ತೆರವು ಕಾರ್ಯಾಚರಣೆ ನಡೆಸುತ್ತಿದ್ದು ಹಸುವಿನ ಕೊಟ್ಟಿಗೆ ನೆಲಸಮ ಮಾಡಲಾಗಿದೆ.

1996ರಲ್ಲಿ ಆಶ್ರಯ ಯೋಜನೆಗಾಗಿ 4 ಎಕರೆ ಮಂಜೂರಾಗಿತ್ತು. ಸದರಿ ಜಮೀನಿನಲ್ಲಿ ಆನಂದೂರು ಗ್ರಾಮದ ಗವಿರಂಗೇಗೌಡ ಹಾಗೂ ಇತರರು 20 ಗುಂಟೆ ಜಮೀನು ಒತ್ತುವರಿ ಮಾಡಿಕೊಂಡಿದ್ದ ಆರೋಪ ಕೇಳಿ ಬಂದಿದ್ದು ಆನಂದೂರು ಗ್ರಾಮದ ಸರ್ವೆ ನಂಬರ್ 6ರಲ್ಲಿ ಒತ್ತುವರಿ ತೆರವು ಮಾಡಲಾಗುತ್ತಿದೆ.

Published on: Aug 20, 2023 10:26 AM
Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More