Kannada News Videos Mysore news Tobacco board official tried to attack farmer for questioning illegality
ಮೈಸೂರು: ಅಕ್ರಮ ಪ್ರಶ್ನಿಸಿದಕ್ಕೆ ರೈತನ ಮೇಲೆ ಹಲ್ಲೆಗೆ ಯತ್ನಿಸಿದ ತಂಬಾಕು ಮಂಡಳಿ ಅಧಿಕಾರಿ
ತಂಬಾಕು ಮಂಡಳಿಯ ಅಧಿಕಾರಿ ಬ್ರಿಜ್ ಭೂಷಣ್ ಎಂಬುವವರು ರೈತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಶೂನಿಂದ ಹಲ್ಲೆಗೆ ಯತ್ನಿಸಿದ್ದಾರೆ. ರೈತನ ಮೇಲೆ ಹಲ್ಲೆಗೆ ಯತ್ನಿಸಿರುವ ವಿಡಿಯೋ ಸಾಮಾಜಿಕ ಜಾಲದಲ್ಲಿ ವೈರಲ್ ಆಗಿದೆ. ಹರಾಜು ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರೈತನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಮೈಸೂರು, ಅ.29: ತಂಬಾಕು ಮಂಡಳಿಯ ಅಧಿಕಾರಿಯಿಂದ ರೈತನ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕೊತ್ತೇಗಾಲ ಗ್ರಾಮದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ರೈತನ ಮೇಲೆ ಶೂನಿಂದ ಹಲ್ಲೆಗೆ ಯತ್ನಿಸಲಾಗಿದೆ. ಹುಣಸೂರು ತಾಲೂಕಿನ ಚಿಲ್ಕುಂದ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಅಕ್ರಮಗಳ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ರೈತ ಕೃಷ್ಣಕುಮಾರ್ ಮೇಲೆ ಪ್ಲಾಟ್ಫಾತಂ 62ನೇ ಅಧೀಕ್ಷಕ ಬ್ರಿಜ್ ಭೂಷಣ್ ಹಲ್ಲೆಗೆ ಯತ್ನಿಸಿದ್ದಾರೆ. ರೈತನ ಮೇಲೆ ಅಧಿಕಾರಿ ಹಲ್ಲೆಗೆ ಯತ್ನಿಸಿರುವ ವಿಡಿಯೋ ವೈರಲ್ ಆಗಿದೆ.