AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ

ಬಿ.ಎಸ್. ಯಡಿಯೂರಪ್ಪ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: May 09, 2026 | 2:13 PM

Share

ಚಿತ್ರದುರ್ಗದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಭಿಮಾನೋತ್ಸವ ಹಿನ್ನೆಲೆ ಮಾದಾರ ಚೆನ್ನಯ್ಯ ಮಠದ ಬಳಿ ಭವ್ಯ ವೇದಿಕೆ ನಿರ್ಮಾಣವಾಗಿದ್ದು, ಸಾವಿರಾರು ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಆಗಮಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಪಂಚ ಕೌಂಟರ್‌ಗಳಲ್ಲಿ ವಿವಿಧ ಭಕ್ಷ್ಯಗಳ ಭರ್ಜರಿ ಭೋಜನ ವ್ಯವಸ್ಥೆ ಮಾಡಲಾಗಿದೆ.

ಚಿತ್ರದುರ್ಗ, ಮೇ 09: ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಭಿಮಾನೋತ್ಸವ ಹಿನ್ನೆಲೆ ಮಾದಾರ ಚೆನ್ನಯ್ಯ ಮಠದ ಸಮೀಪ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ. ಪ್ರವೇಶ ದ್ವಾರಗಳನ್ನು ಏಳು ಸುತ್ತಿನ ಕೋಟೆಯ ಮಾದರಿಯಲ್ಲಿ ನಿರ್ಮಿಸಲಾಗಿದ್ದು, ನರೇಂದ್ರ ಮೋದಿ, ಅಮಿತ್ ಶಾ ಮತ್ತು ಯಡಿಯೂರಪ್ಪ ಅವರ ಕಟೌಟ್‌ಗಳು ರಾರಾಜಿಸುತ್ತಿವೆ. ಕಾರ್ಯಕ್ರಮಕ್ಕೆ ಬಿ.ಎಸ್.ವೈ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು, ಎಲ್ಲರಿಗೂ ಉಪಹಾರ ಮತ್ತು ಭೋಜನ ವ್ಯವಸ್ಥೆ ಮಾಡಲಾಗಿದೆ. 1,250ಕ್ಕೂ ಹೆಚ್ಚು ಬಾಣಸಿಗರು ಕಾರ್ಯನಿರ್ವಹಿಸುತ್ತಿದ್ದು, ಮೈಸೂರ್ ಪಾಕ್, ಮೊಸರನ್ನ, ಟೊಮೆಟೊ ಬಾತ್, ಪಲಾವ್, ಮೆಂತ್ಯ ಪಲಾವ್ ಸೇರಿದಂತೆ ವಿವಿಧ ಖಾದ್ಯಗಳ ವ್ಯವಸ್ಥೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us