ದುಬೈನಲ್ಲಿ ನಡೆದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಮೈಸೂರು ಯುವಕನ ಸಾಧನೆ, ಬಾಕ್ಸಿಂಗ್​ನಲ್ಲಿ ಬಾಲಕನಿಗೆ ಕಂಚು

ಮೈಸೂರಿನ ಶಾರದದೇವಿ ನಗರದ ನಿವಾಸಿ ಪರಿಕ್ಷೀತ್‌ ಪ್ರದೀಪ್ ಎಂಬ ಬಾಲಕ ಜರ್ಮನಿಯಲ್ಲಿ ನಡೆದ ಕಿಕ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಪದಕ ಗಳಿಸಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾನೆ. ಮತ್ತೊಂದೆಡೆ ಫಿಟ್ನೆಸ್ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮೈಸೂರಿನ ನಾಯ್ಡು ನಗರದ ವಿನೋದ್ ಗೌಡ ದುಬೈನ ಯುಎಇನಲ್ಲಿ ನಡೆದ ವಿಶ್ವ ದರ್ಜೆಯ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಬಹುಮಾನ ಪಡೆದಿದ್ದಾರೆ.

ದುಬೈನಲ್ಲಿ ನಡೆದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಮೈಸೂರು ಯುವಕನ ಸಾಧನೆ, ಬಾಕ್ಸಿಂಗ್​ನಲ್ಲಿ ಬಾಲಕನಿಗೆ ಕಂಚು
| Edited By: Ayesha Banu

Updated on: Nov 06, 2023 | 5:22 PM

ಮೈಸೂರು, ನ.06: ಸಾಂಸ್ಕೃತಿಕ ನಗರಿ ಮೈಸೂರು (Mysuru) ಹೇಳಿ ಕೇಳಿ ಕಲೆ ರಾಜ ಪರಂಪರೆಯ ನಾಡು. ಪ್ರವಾಸಿಗರ ಸ್ವರ್ಗ, ಕವಿಗಳ ಸ್ಪೂರ್ತಿಯ ಊರು. ಅಷ್ಟೇ ಅಲ್ಲ ಇದು ಹೆಮ್ಮೆಯ ಕ್ರೀಡಾಪಟುಗಳ ತವರೂರು. ಇದಕ್ಕೆ ಸಾಕ್ಷಿ ಯುವಕ ಹಾಗೂ ಬಾಲಕ. ಸಾಂಸ್ಕೃತಿಕ ನಗರಿ ಮೈಸೂರಿನ ಬಾಲಕ ಹಾಗೂ ಯುವಕ ವಿದೇಶದಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ್ದಾರೆ.

ಮೈಸೂರಿನ ಶಾರದದೇವಿ ನಗರದ ನಿವಾಸಿ ಪರಿಕ್ಷೀತ್‌ ಪ್ರದೀಪ್ ಎಂಬ ಬಾಲಕ ಜರ್ಮನಿಯಲ್ಲಿ ನಡೆದ ಕಿಕ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಪದಕ ಗಳಿಸಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾನೆ. ನಾಲ್ಕನೇ ತರಗತಿ ಓದುತ್ತಿರುವ ಪರಿಕ್ಷೀತ್ 45 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ಕೆ1 ಲೈಟ್ ವಿಭಾಗದಲ್ಲಿ ಕಂಚಿನ ಪದಕ ಗಳಿಸಿದ್ದಾನೆ. ಇನ್ನು ಬಾಲಕನ ಜೊತೆಗೆ ಮೈಸೂರಿನ ಯುವಕ ಸಹಾ ದೂರದ ದುಬೈನಲ್ಲಿ ಸಾಧನೆ ಮಾಡಿದ್ದಾನೆ. ಫಿಟ್ನೆಸ್ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮೈಸೂರಿನ ನಾಯ್ಡು ನಗರದ ವಿನೋದ್ ಗೌಡ ದುಬೈನ ಯುಎಇನಲ್ಲಿ ನಡೆದ ವಿಶ್ವ ದರ್ಜೆಯ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಬಹುಮಾನ ಪಡೆದಿದ್ದಾರೆ.

IFBB ಫೆಡರೇಶನ್ ಆಯೋಜಿಸಿದ ಬಾಡಿ ಬಿಲ್ಡಿಂಗ್ ಸ್ಪರ್ಧೆಗೆ ವಿಶ್ವದ ಮೂಲೆ ಮೂಲೆಗಳಿಂದ ಅನೇಕ ಸ್ಪರ್ಧಿಗಳು ಬಂದಿದ್ದರು. ವಿನೋದ್ ಫಿಟ್ನೆಸ್ ಮಾಡೆಲ್ ವಿಭಾಗದಲ್ಲಿ ಮೊದಲನೆ ಸ್ಥಾನ ಹಾಗೂ ಬಾಡಿ ಸ್ಟೈಲ್ ಪೋಸಿಂಗ್‌ನಲ್ಲಿ ಮೂರನೆಯ ಸ್ಥಾನ ಪಡೆಸಿದ್ದಾರೆ. ಅಷ್ಟೇ ಅಲ್ಲ ಮೆನ್ಸ್ ಫಿಸಿಕ್ಸ್ ನಲ್ಲಿ ಐದನೇ ಸ್ಥಾನ ಪಡೆದಿದ್ದರೆ.

ಸದ್ಯ ಇವರಿಬ್ಬರು ಮೈಸೂರಿನ ಕೀರ್ತಿ ಪತಾಕೆಯನ್ನು ಜಾಗತಿಕ ಮಟ್ಟದಲ್ಲಿ ಹಾರಿಸಿದ್ದಾರೆ. ಪರಿಕ್ಷೀತ್ ಕಿಕ್ ಬಾಕ್ಸಿಂಗ್‌ನಲ್ಲಿ ಮತ್ತಷ್ಟು ಸಾಧನೆ ಮಾಡಬೇಕೆಂಬ ಕನಸು ಕಟ್ಟಿಕೊಂಡಿದ್ದರೆ, ವಿನೋದ್ ಒಲಂಪಿಕ್‌ನಲ್ಲಿ ದೇಶವನ್ನು ಪ್ರತಿನಿಧಿಸಬೇಕೆಂಬ ಮಹದಾಶೆ ಹೊಂದಿದ್ದಾರೆ. ಇಬ್ಬರ ಕನಸು ನನಸಾಗಲಿ ಇಬ್ಬರು ದೇಶಕ್ಕೆ ಮತ್ತಷ್ಟು ಕೀರ್ತಿ ತರಲಿ ಅನ್ನೋದೆ ಎಲ್ಲರ ಆಶಯ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಅಧಿಕಾರಿಯೊಬ್ಬರ ವಿರುದ್ಧ ರೌಡಿಯಂತೆ ವರ್ತಿಸೋದು ಶಾಸಕ  ಹರೀಶ್ ಗೆ ಶೋಭೆಯಲ್ಲ!
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ