ಮೈಸೂರು ಜಿಲ್ಲೆಯಲ್ಲಿ 13 ವರ್ಷಗಳ ನಂತರ ತೆರೆದ ದೇಗುಲದ ಬಾಗಿಲು

Edited By: ವಿವೇಕ ಬಿರಾದಾರ

Updated on: Dec 14, 2024 | 8:26 AM

ಮೈಸೂರು ತಾಲೂಕಿನ ಮಾರ್ಬಳ್ಳಿ ಗ್ರಾಮದ ಮಾರಮ್ಮ ದೇವಸ್ಥಾನವು 13 ವರ್ಷಗಳ ಬಳಿಕ ಮರು ತೆರೆದಿದೆ. ಭೂ ವಿವಾದದಿಂದಾಗಿ ದೇವಾಲಯ ಮುಚ್ಚಲ್ಪಟ್ಟಿತ್ತು. ತಹಶೀಲ್ದಾರರ ಮಧ್ಯಸ್ಥಿಕೆಯಿಂದ ಸಮುದಾಯ ನಾಯಕರ ನಡುವೆ ಸಮಸ್ಯೆಗೆ ಪರಿಹಾರ ಸಿಕ್ಕಿದ್ದು, ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ವಿಶೇಷ ಪೂಜೆ ನಡೆಸಲಾಗಿದೆ ಮತ್ತು ಈಗ ದೇವಾಲಯದಲ್ಲಿ ಪೂಜಾ ಕೈಂಕರ್ಯಗಳು ಮುಂದುವರಿಯಲಿವೆ.

ಮೈಸೂರು ಜಿಲ್ಲೆ ಮೈಸೂರು ತಾಲೂಕಿನ ಮಾರ್ಬಳ್ಳಿ ಗ್ರಾಮದ ಮಾರಮ್ಮ ದೇವಾಲಯದ ಬಾಗಿಲು 13 ವರ್ಷಗಳ ನಂತರ ತೆರೆದಿದೆ. ದೇವಸ್ಥಾನದ ಜಾಗದ ವಿಚಾರವಾಗಿ 13 ವರ್ಷದ ಹಿಂದೆ ಎರಡು ಸಮುದಾಯದ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಬೀಗ ಹಾಕಲಾಗಿತ್ತು. ಶುಕ್ರವಾರ (ಡಿ.13) ರಂದು ಮೈಸೂರು ತಾಲೂಕು ತಹಶೀಲ್ದಾರ್ ಮಹೇಶ್ ಕುಮಾರ್ ಅವರು ಎರಡು ಸಮುದಾಯದ ಮುಖಂಡರನ್ನು ಕರೆಸಿ ಸಭೆ ನಡೆಸಿ ಸಮಸ್ಯೆಗೆ ಪರಿಹಾರ ನೀಡಿದ್ದಾರೆ. ಸಮಸ್ಯೆ ಬಗೆ ಹರಿದ ಹಿನ್ನೆಲೆಯಲ್ಲಿ ಮುಚ್ಚಿದ್ದ ಮಾರಮ್ಮನ ದೇವಸ್ಥಾನದ ಬಾಗಿಲು ತೆರಯಲಾಯಿತು. ಬಳಿಕ ವಿಶೇಷ ಪೂಜೆ ಮಾಡಲಾಯಿತು. ಇಂದಿನಿಂದ (ಡಿ.14) ಎಂದಿನಂತೆ ಪೂಜಾ ಕೈಂಕರ್ಯ ನಡೆಯಲಿವೆ.

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More