ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು: ವಾಟಾಳ್ ನಾಗರಾಜ್, ಕನ್ನಡ ಪರ ಹೋರಾಟಗಾರ

ಅರುಣ್​ ಕುಮಾರ್​ ಬೆಳ್ಳಿ

Updated on: Dec 21, 2023 | 5:22 PM

ಮೊದಲಿಂದಲೂ ಟಿಪ್ಪು ಒಬ್ಬ ದೇಶದ್ರೋಹಿ ಎಂಬ ಮನಸ್ಥಿತಿಯನ್ನು ಉಂಟು ಮಾಡುವ ಪ್ರಯತ್ನ ನಡೆದಿದೆ, ಆದರೆ ಕನ್ನಂಬಾಡಿಗೆ ಶಂಕುಸ್ಥಾಪನೆ ನೆರವೇರಿಸಿದ್ದು, ಶೃಂಗೇರಿ ಮಠಕ್ಕೆ ಬೆಂಬಲ ನೀಡಿದ್ದು ಟಿಪ್ಪು ಅಂತ ಬಹಳ ಜನಕ್ಕೆ ಗೊತ್ತಿಲ್ಲ ಎಂದು ಹೇಳಿದರು. ಬ್ರಿಟಿಷರ ವಿರುದ್ಧ ಹೋರಾಡುವಾಗ ತನ್ನ ಮಕ್ಕಳನ್ನೇ ಒತ್ತೆಯಿಟ್ಟ ಟಿಪ್ಪು ದೇಶದ್ರೋಹಿ ಹೇಗಾಗುತ್ತಾನೆ ಎಂದು ವಾಟಾಳ್ ನಾಗರಾಜ್ ಕೇಳಿದರು.

ಮೈಸೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಖ್ಯಾತ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj), ಟಿಪ್ಪು ಸುಲ್ತಾನ್ ನನ್ನು (Tipu Sultan) ಮನಸಾರೆ ಕೊಂಡಾಡಿದರಲ್ಲದೆ, ಮೈಸೂರು ವಿಮಾನ ನಿಲ್ದಾಣಕ್ಕೆ (Mysuru airport) ಟಿಪ್ಪು ಹೆಸರಿಡಬೇಕು ಎಂದು ಹೇಳಿದರು. ಮೈಸೂರು ಮಹಾರಾಜರ ಹೆಸರುಗಳನ್ನು ಬಹಳಷ್ಟು ಸ್ಥಳಗಳಿಗೆ ಇಟ್ಟಿರುವುದರಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕೆಂದು ಪ್ರತಿಪಾದಿಸುವುದಾಗಿ ಅವರು ಹೇಳಿದರು. ಮೊದಲಿನಿಂದಲೂ ತಾನು ಟಿಪ್ಪು ಜಯಂತಿಯನ್ನು ಬೆಂಬಲಿಸಿಕೊಂಡು ಬಂದಿರುವುದಾಗಿ ಹೇಳಿದ ವಾಟಾಳ್ ಟಿಪ್ಪು ಸಮಾಧಿಗೆ ಆಗಾಗ ಭೇಟಿ ನೀಡಿ ಪೂಜೆ ಸಲ್ಲಿಸಿರುವುದಾಗಿ ಹೇಳಿದರು. ಮುಂದುವರಿದು ಮಾತಾಡಿದ ಅವರು, ಮೊದಲಿಂದಲೂ ಟಿಪ್ಪು ಒಬ್ಬ ದೇಶದ್ರೋಹಿ ಎಂಬ ಮನಸ್ಥಿತಿಯನ್ನು ಉಂಟು ಮಾಡುವ ಪ್ರಯತ್ನ ನಡೆದಿದೆ, ಆದರೆ ಕನ್ನಂಬಾಡಿಗೆ ಶಂಕುಸ್ಥಾಪನೆ ನೆರವೇರಿಸಿದ್ದು, ಶೃಂಗೇರಿ ಮಠಕ್ಕೆ ಬೆಂಬಲ ನೀಡಿದ್ದು ಟಿಪ್ಪು ಅಂತ ಬಹಳ ಜನಕ್ಕೆ ಗೊತ್ತಿಲ್ಲ ಎಂದು ಹೇಳಿದರು. ಬ್ರಿಟಿಷರ ವಿರುದ್ಧ ಹೋರಾಡುವಾಗ ತನ್ನ ಮಕ್ಕಳನ್ನೇ ಒತ್ತೆಯಿಟ್ಟ ಟಿಪ್ಪು ದೇಶದ್ರೋಹಿ ಹೇಗಾಗುತ್ತಾನೆ ಎಂದು ವಾಟಾಳ್ ನಾಗರಾಜ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.