Kannada Rajyotsava: ಮೈಸೂರಿನ ಭುವನೇಶ್ವರಿ ತಾಯಿಗೆ ಸಚಿವ ಮಹದೇವಪ್ಪ ವಿಶೇಷ ಪೂಜೆ

Edited By:

Updated on: Nov 01, 2023 | 3:40 PM

ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಸಡಗರ ಮನೆ ಮಾಡಿದೆ. ಮೈಸೂರಿನ ಅರಮನೆಯ ಆವರಣದಲ್ಲಿರುವ ಜೈ ಭುವನೇಶ್ವರಿ ದೇವಸ್ಥಾನದಲ್ಲಿ‌ ವಿಶೇಷ ಪೂಜೆ ಸಲ್ಲಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌ ಸಿ ಮಹದೇವಪ್ಪ ಪೂಜೆ ಸಲ್ಲಿಸಿದರು. ಅರಮನೆಯ ಬಲರಾಮ ದ್ವಾರದಿಂದ ಓವಲ್ ಮೈದಾನದವರೆಗೆ ಜೈಭುವನೇಶ್ವರಿ ಪ್ರತಿಮೆ ಮೆರವಣಿಗೆ ನಡೆಯಿತು.

ಮೈಸೂರು, ನ.01: ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಸಡಗರ ಮನೆ ಮಾಡಿದೆ (Kannada Rajyotsava). ಕರ್ನಾಟಕ ಏಕೀಕರಣಕ್ಕೆ 50 ವರ್ಷ ಸಂದಿರುವ ಹಿನ್ನೆಲೆ ಈ ಬಾರಿ ರಾಜ್ಯೋತ್ಸವದ‌ ಸಂಭ್ರಮ ಹೆಚ್ಚಿದೆ. ಮೈಸೂರಿನಲ್ಲಿರುವ (Mysuru) ಕನ್ನಡಾಂಬೆ ತಾಯಿ ಭುವನೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಮೈಸೂರು ರೈಲು ನಿಲ್ದಾಣದಿಂದ 3 ಕಿಮೀ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ 2 ಕಿಮೀ ದೂರ ಮೈಸೂರಿನ ಅರಮನೆಯ ಆವರಣದಲ್ಲಿರುವ ಜೈ ಭುವನೇಶ್ವರಿ ದೇವಸ್ಥಾನದಲ್ಲಿ‌ ವಿಶೇಷ ಪೂಜೆ ಸಲ್ಲಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌ ಸಿ ಮಹದೇವಪ್ಪ ಪೂಜೆ ಸಲ್ಲಿಸಿದರು. ಅರಮನೆಯ ಬಲರಾಮ ದ್ವಾರದಿಂದ ಓವಲ್ ಮೈದಾನದವರೆಗೆ ಜೈಭುವನೇಶ್ವರಿ ಪ್ರತಿಮೆ ಮೆರವಣಿಗೆ ನಡೆಯಿತು.

ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More