ಮೇಘಾಲಯ ರಾಜ್ಯಪಾಲರಾಗಿ ನೇಮಕವಾಗಿದ್ದಕ್ಕೆ ವಿಜಯಶಂಕರ್ ಹೇಳಿದ್ದೇನು? ಇಲ್ಲಿದೆ ಮನದ ಮಾತು

Edited By:

Updated on: Jul 28, 2024 | 1:33 PM

ಕರ್ನಾಟಕ ಬಿಜೆಪಿ ಹಿರಿಯ ನಾಯಕ, ಮಾಜಿ ಸಂಸದರಾಗಿದ್ದ ಮೈಸೂರಿನ ವಿಜಯಶಂಕರ್ ಅವರನ್ನು ಮೇಘಾಲಯದ ರಾಜ್ಯಪಾಲರನ್ನಾಗಿದೆ ನೇಮಕ ಮಾಡಲಾಗಿದೆ. ಇನ್ನು ನೂತನ ರಾಜ್ಯಪಾಲರಾಗಿ ನೇಮಕಗೊಂಡ ಸಿ ಎಚ್ ವಿಜಯಶಂಕರ್ ಹಾಗೂ ಅವರ ಪತ್ನಿ ಬಬಿತಾ ವಿಜಯಶಂಕರ್ ಜೊತೆ ನಮ್ಮ ಮೈಸೂರು ಪ್ರತಿನಿಧಿ ರಾಮ್ ನಡೆಸಿರುವ ಮಾತುಕತೆ ಇಲ್ಲಿದೆ ನೋಡಿ.

ಮೈಸೂರು, (ಜುಲೈ 28): ಮೇಘಾಲಯದ (Meghalaya) ರಾಜ್ಯಪಾಲರಾಗಿ (Meghalaya Governor) ಕರ್ನಾಟಕದ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ (CH Vijayashankar) ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರದ ಶಿಫಾರಸ್ಸಿನಂತೆ ವಿಜಯಶಂಕರ್‌ ಅವರನ್ನು ಮೇಘಾಲಯದ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಆದೇಶ ಹೊರಡಿಸಿದ್ದಾರೆ. ನಿನ್ನೆ (ಜುಲೈ 27)ತಡರಾತ್ರಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ವಿಜಯಶಂಕರ್‌ ಅವರು ಮೈಸೂರಿನ ಮಾಜಿ ಸಂಸದ ಹಾಗೂ ಮಾಜಿ ಸಚಿವರಾಗಿದ್ದರು.

ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಕ್ಯಾಬಿನೆಟ್ ಮಂತ್ರಿಯಾಗಿ ಅರಣ್ಯ, ಪರಿಸರ ಇಲಾಖೆ, ಸಣ್ಣ ಪ್ರಮಾಣದ ಕೈಗಾರಿಕೆಗಳು ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ವಿರುದ್ಧ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. 15 ಜೂನ್ 2010ರಿಂದ ಜನವರಿ 2016ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿದ್ದರು. 2017ರ ಅಕ್ಟೋಬರ್‌ನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು. ಬಳಿಕ 2019ರಲ್ಲಿ ಮರಳಿ ಬಿಜೆಪಿ ಸೇರಿದ್ದರು. ಇದೀಗ ವಿಜಯಶಂಕರ್ ಅವರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಇನ್ನು ನೂತನ ರಾಜ್ಯಪಾಲರಾಗಿ ನೇಮಕಗೊಂಡ ಸಿ ಎಚ್ ವಿಜಯಶಂಕರ್ ಹಾಗೂ ಅವರ ಪತ್ನಿ ಬಬಿತಾ ವಿಜಯಶಂಕರ್ ಜೊತೆ ನಮ್ಮ ಮೈಸೂರು ಪ್ರತಿನಿಧಿ ರಾಮ್ ನಡೆಸಿರುವ ಮಾತುಕತೆ ಇಲ್ಲಿದೆ ನೋಡಿ.

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More