ಗ್ಯಾಸ್ ಸಿಲಿಂಡರ್​​ ಇಲ್ಲದಿದ್ದರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಸಿಗುತ್ತೆ ಹೊಟ್ಟೆ ತುಂಬ ಪ್ರಸಾದ

Edited By:

Updated on: Mar 14, 2026 | 2:55 PM

ಅಮೆರಿಕ, ಇಸ್ರೇಲ್ ಹಾಗೂ ಇರಾನ್ ದೇಶಗಳ ನಡೆಯುತ್ತಿರುವ ಯುದ್ಧವು ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ಭಾರತದಲ್ಲಿ ವಾಣಿಜ್ಯ ಹಾಗೂ ಅಡುಗೆ ಅನಿಲ ಸಿಲಿಂಡರ್ ಕೊರತೆಯ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ಯಾಸ್ ಸಿಲಿಂಡರ್ ಅಭಾವದಿಂದಾಗಿ ಕರ್ನಾಟಕದ ದೇವಸ್ಥಾನದ ಪ್ರಸಾದಕ್ಕೂ ಬಿಸಿ ತಟ್ಟಿದೆ. ಹೌದು...ದೇವಸ್ಥಾನಗಳಲ್ಲಿ ಭಕ್ತರಿಗೆ ತಯಾರಿಸುವ ಪ್ರಸಾದಕ್ಕೆ ಗ್ಯಾಸ್ ಸಮಸ್ಯೆ ಎದುರಾಗಿದೆ. ಹೀಗಾಗಿ ಕೆಲ ದೇವಾಲಯಗಳು ಸೌದೆ ಒಲೆ ಮೊರೆ ಹೋಗಿವೆ. ಹೌದು.. ಮೈಸೂರು ಇತಿಹಾಸ ಪ್ರಸಿದ್ಧ ಚಾಮುಂಡೇಶ್ವರಿ ದೇವಾಲಯದಲ್ಲೂ ಸಹ ಸೌದೆ ಒಲೆಯಿಂದಲೇ ಪ್ರಸಾದ ತಯಾರಿಸಲಾಗುತ್ತಿದೆ. ಹೀಗಾಗಿ ಗ್ಯಾಸ್ ಇಲ್ಲದಿದ್ದರೂ ಸಹ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಹೊಟ್ಟೆ ತುಂಬ ಪ್ರಸಾದ ದೊರೆಯುತ್ತಿದೆ.

ಮೈಸೂರು, (ಮಾರ್ಚ್ 14): ಅಮೆರಿಕ, ಇಸ್ರೇಲ್ ಹಾಗೂ ಇರಾನ್ ದೇಶಗಳ ನಡೆಯುತ್ತಿರುವ ಯುದ್ಧವು ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ಭಾರತದಲ್ಲಿ ವಾಣಿಜ್ಯ ಹಾಗೂ ಅಡುಗೆ ಅನಿಲ ಸಿಲಿಂಡರ್ ಕೊರತೆಯ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ಯಾಸ್ ಸಿಲಿಂಡರ್ ಅಭಾವದಿಂದಾಗಿ ಕರ್ನಾಟಕದ ದೇವಸ್ಥಾನದ ಪ್ರಸಾದಕ್ಕೂ ಬಿಸಿ ತಟ್ಟಿದೆ. ಹೌದು…ದೇವಸ್ಥಾನಗಳಲ್ಲಿ ಭಕ್ತರಿಗೆ ತಯಾರಿಸುವ ಪ್ರಸಾದಕ್ಕೆ ಗ್ಯಾಸ್ ಸಮಸ್ಯೆ ಎದುರಾಗಿದೆ. ಹೀಗಾಗಿ ಕೆಲ ದೇವಾಲಯಗಳು ಸೌದೆ ಒಲೆ ಮೊರೆ ಹೋಗಿವೆ. ಹೌದು.. ಮೈಸೂರು ಇತಿಹಾಸ ಪ್ರಸಿದ್ಧ ಚಾಮುಂಡೇಶ್ವರಿ ದೇವಾಲಯದಲ್ಲೂ ಸಹ ಸೌದೆ ಒಲೆಯಿಂದಲೇ ಪ್ರಸಾದ ತಯಾರಿಸಲಾಗುತ್ತಿದೆ. ಹೀಗಾಗಿ ಗ್ಯಾಸ್ ಇಲ್ಲದಿದ್ದರೂ ಸಹ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಹೊಟ್ಟೆ ತುಂಬ ಪ್ರಸಾದ ದೊರೆಯುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us