ಮೈಸೂರು: ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹತ್ವವೇನು? ಪ್ರಧಾನ ಅರ್ಚಕರು ವಿವರಿಸಿದ್ದಾರೆ ನೋಡಿ

ಮೈಸೂರಿನ ಚಾಮುಂಡೇಶ್ವರಿ ದೇಗುಲದಲ್ಲಿಂದು ಚಾಮುಂಡೇಶ್ವರಿ ದೇವಿಯ ವರ್ಧಂತಿ ಉತ್ಸವದ ಸಂಭ್ರಮ. ಉತ್ಸವದ ಸಂಭ್ರಮ ಕಣ್ತುಂಬಿಸಿಕೊಳ್ಳಲು ಭಕ್ತರು ಸಾವಿರಾರು ಸಂಖ್ಯೆಯಲ್ಲಿ ದೇಗುಲಕ್ಕೆ ಬರುತ್ತಿದ್ದಾರೆ. ಮತ್ತೊಂದೆಡೆ, ಸಿಂಗಾರಗೊಂಡಿರುವ ಚಾಮುಂಡಿ ಬೆಟ್ಟ ಝಗಮಗಿಸುತ್ತಿದೆ. ಈ ಹೊತ್ತಿನಲ್ಲಿ ವರ್ಧಂತಿ ಉತ್ಸವದ ಮಹತ್ವದ ಬಗ್ಗೆ ದೇಗುಲದ ಪ್ರಧಾನ ಅರ್ಚಕ ಡಾ ಎನ್ ಶಶಿಶೇಖರ ದೀಕ್ಷಿತ್ ಮಾಹಿತಿ ನೀಡಿದ್ದು, ವಿಡಿಯೋ ಇಲ್ಲಿದೆ.

ಮೈಸೂರು: ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹತ್ವವೇನು? ಪ್ರಧಾನ ಅರ್ಚಕರು ವಿವರಿಸಿದ್ದಾರೆ ನೋಡಿ
| Updated By: ಗಣಪತಿ ಶರ್ಮ

Updated on: Jul 27, 2024 | 6:50 PM

ಮೈಸೂರು, ಜುಲೈ 27: ‘‘ಚಾಮುಂಡೇಶ್ವರಿ ದೇವಿಯ ಹುಟ್ಟುಹಬ್ಬದ ಉತ್ಸವವನ್ನು ನಾವಿಂದು ಆಚರಿಸುತ್ತಿದ್ದೇವೆ. ಇದನ್ನು ಸಂಸ್ಕೃತದಲ್ಲಿ ವರ್ಧಂತಿ ಎಂದು ಕರೆಯುತ್ತೇವೆ. ಆಷಾಢ ಮಾಸದ ಕೃಷ್ಣಪಕ್ಷ ರೇವತಿ ನಕ್ಷತ್ರದಂದು ಇಲ್ಲಿ ಚಾಮುಂಡೇಶ್ವರಿ ದೇವಿಯ ಹುಟ್ಟುಹಬ್ಬ ಆಚರಿಸುತ್ತಿದ್ದೇವೆ. ಇದು ಇಲ್ಲಿನ ವಿಶೇಷ ಉತ್ಸವ’’ ಎಂದು ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇಗುಲದ ಪ್ರಧಾನ ಅರ್ಚಕ ಡಾ ಎನ್ ಶಶಿಶೇಖರ ದೀಕ್ಷಿತ್ ತಿಳಿಸಿದರು. ಉತ್ಸವದ ಶುಭ ಸಂದರ್ಭದಲ್ಲಿ ‘ಟಿವಿ9’ ಜತೆ ಮಾತನಾಡಿದ ಅವರು, ಉತ್ಸವದ ಮಹತ್ವ ಏನು ಎಂಬುದನ್ನು ವಿವರಿಸಿದ್ದಾರೆ.

ಉತ್ಸವದ ಪ್ರಯುಕ್ತ ಬೆಳಗ್ಗೆ 4.30ರಿಂದಲೇ ಪಂಚಾಮೃತಾಭಿಷೇಕ, ರುದ್ರಾಭಿಷೇಕ, ಅಭ್ಯಂಜನ ಸ್ನಾನ ಮಾಡಲಾಗಿದೆ. ನಾವು ಮಕ್ಕಳಿಗೆ ಯಾವ ರೀತಿ ಎಣ್ಣೆ ಸ್ನಾನ ಮಾಡಿಸುತ್ತೇವೆಯೋ ಅದೇ ರೀತಿ ದೇವಿಗೆ ಅಭ್ಯಂಜನ ಸ್ನಾನ ಮಾಡಿಸಲಾಗಿದೆ. ಇದು ಇಂದಿನ ವಿಶೇಷ. ಬೆಳಗ್ಗೆ 8.30ರಿಂದಲೇ ದೇಗುಲದಲ್ಲಿ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 10.30ಕ್ಕೆ ರಾಜವಂಶದವರು ಬಂದು ಉತ್ಸವಕ್ಕೆ ಚಾಲನೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

ಉತ್ಸವದ ಬಗ್ಗೆ ಅವರು ನೀಡಿರುವ ಇನ್ನಷ್ಟು ಮಾಹಿತಿ ಮೇಲಿನ ವಿಡಿಯೋದಲ್ಲಿದೆ.

ವರ್ಧಂತಿ ಉತ್ಸವದ ಸಂಭ್ರಮದಲ್ಲಿ ಚಾಮುಂಡೇಶ್ವರಿ ದೇಗುಲ: ಚಿತ್ರಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಚಾಮುಂಡೇಶ್ವರಿ ದೇಗುಲದಲ್ಲಿ ಆಷಾಢ ಶುಕ್ರವಾರಗಳ ವಿಶೇಷ ಪೂಜೆ ಹಾಗೂ ದೇವಿಯ ವರ್ಧಂತಿ ಉತ್ಸವ ನಡೆಯುತ್ತಿದೆ. ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಬೆಳಗ್ಗೆ 8.30ರಿಂದಲೇ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಅಭ್ಯಂಜನ ಸ್ನಾನ, ರುದ್ರಾಭಿಷೇಕ, ಪಂಚಾಮೃತಭಿಷೇಕ, ಕುಂಕುಮಾರ್ಚನೆ ಸೇವೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್