ಮೈಸೂರಿನ ರೌಡಿಗಳಿಗೆ ಪೊಲೀಸ್ ಕಮೀಶನರ್ ರಮೇಶ್ ಬಾನೋತ್ ಖಡಕ್ ಎಚ್ಚರಿಕೆ, ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ

ಅರುಣ್​ ಕುಮಾರ್​ ಬೆಳ್ಳಿ

Updated on: Aug 14, 2023 | 11:30 AM

ಎಡಿಜಿಪಿ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್, ರಮೇಶ್ ಬಾನೋತ್ ಅವರಂಥ ದಕ್ಷ ಅಧಿಕಾರಿಗಳಿದ್ದ ಕಡೆ ರೌಡಿಶೀಟರ್, ಪುಡಿ ರೌಡಿಗಳು ಬಾಲ ಮುದುರಿಕೊಂಡು ಬಿಲ ಸೇರಿಬಿಡುತ್ತಾರೆ. ಯಾವನಾದರೂ ಬಾಲ ಬಿಚ್ಚುವ ಪ್ರಯತ್ನ ಮಾಡಿದರೆ ತಕ್ಕ ಶಿಕ್ಷೆ ತಪ್ಪಿದ್ದಲ್ಲ!

ಮೈಸೂರು: ಐಪಿಎಸ್ ಅಧಿಕಾರಿ ರಮೇಶ್ ಬಾನೋತ್ (Ramesh Banot) ನಗರದ ಪೊಲೀಸ್ ಕಮೀಶನರ್ ಆಗಿ ಚಾರ್ಜ್ ವಹಿಸಿಕೊಂಡು ಸುಮಾರು 10 ತಿಂಗಳು ಕಳೆದಿರಬಹುದು. ಈ ಅವಧಿಯಲ್ಲಿ ರಾಜ್ಯದ ಸಾಂಸ್ಕೃತಿಕ ರಾಜಧಾನಿಯಲ್ಲಿ ಅಪರಾಧ ಕೃತ್ಯಗಳ ಪ್ರಮಾಣದಲ್ಲಿ ಇಳಿಕೆಯಾಗಿದೆ ಅಂತ ನಗರದ ನಿವಾಸಿಗಳು ಹೇಳುತ್ತಾರೆ. ಊರಿದ್ದಲ್ಲಿ ರೌಡಿಗಳಿರಲೇಬೇಕು, ರೌಡಿಗಳಿದ್ದಲ್ಲಿ ಸಮಾಜಘಾತುಕ, ಕಾನೂನುಬಾಹಿರ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತವೆ. ಆದರೆ ಎಡಿಜಿಪಿ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ (ADGP Alok Kumar), ರಮೇಶ್ ಬಾನೋತ್ ಅವರಂಥ ದಕ್ಷ ಅಧಿಕಾರಿಗಳಿದ್ದ ಕಡೆ ರೌಡಿಶೀಟರ್, ಪುಡಿ ರೌಡಿಗಳು (small time rowdies) ಬಾಲ ಮುದುರಿಕೊಂಡು ಬಿಲ ಸೇರಿಬಿಡುತ್ತಾರೆ. ಯಾವನಾದರೂ ಬಾಲ ಬಿಚ್ಚುವ ಪ್ರಯತ್ನ ಮಾಡಿದರೆ ಅಂಥವರನ್ನು ಠಾಣೆಗಳಿಗೆ ಕರೆಸಿ ಪರೇಡ್ ಮಾಡಿಸುವುದರ ಜೊತೆ ಇಲ್ಲಿ ರಮೇಶ್ ಬಾನೋತ್ ಮಾಡುತ್ತಿದ್ದಾರಲ್ಲ, ಹಾಗೆ ಎಚ್ಚರಿಸಲಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.