ಸುತ್ತೂರು ಜಾತ್ರೆ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ ಸಿಎಂ ಕಾರು: ಅಧಿಕಾರಿಗಳು ಹರಸಾಹಸ
ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾರು ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ ಘಟನೆ ನಡೆದಿದೆ. ವಾಹನ ತೆರವುಗೊಳಿಸಲು ಮೈಸೂರು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹರಸಾಹಸ ಪಟ್ಟರು. ಈ ವೇಳೆ ಬೈಕ್ ಸವಾರನಿಗೆ ಒದೆಯಲು ಎಸ್ಪಿ ಮುಂದಾಗಿದ್ದು, ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
ಮೈಸೂರು, ಜನವರಿ 18: ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಕಾರು ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ ಘಟನೆ ನಡೆದಿದೆ. ಸುಮಾರು 3 ಕಿ.ಮೀ ಜಾಮ್ ಉಂಟಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ವಾಹನಕ್ಕೆ ದಾರಿ ಮಾಡಲು ಪೊಲೀಸ್ ಅಧಿಕಾರಿಗಳು ಹರಸಾಹಸ ಪಟ್ಟರು. ಖುದ್ದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ರಸ್ತೆಗಿಳಿದರು. ಈ ವೇಳೆ ಸವಾರನಿಗೆ ಕಾಲಿನಲ್ಲಿ ಒದೆಯಲು ಎಸ್ಪಿ ಮುಂದ್ದಾಗಿದ್ದು, ದೃಶ್ಯ ಮೊಬೈಲ್ನಲ್ಲಿ ಸೆರೆ ಆಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.