ಚೆನ್ನೈ ಬಳಿ ಮೈಸೂರು-ದರ್ಭಂಗ ರೈಲು ಅಪಘಾತ, ಹಲವರಿಗೆ ಗಾಯ, 9 ಜನರ ಸ್ಥಿತಿ ಗಂಭೀರ

ಅರುಣ್​ ಕುಮಾರ್​ ಬೆಳ್ಳಿ

Updated on: Oct 12, 2024 | 10:40 AM

ನಮ್ಮ ವರದಿಗಾರರ ಹೇಳುವ ಪ್ರಕಾರ ಎನ್​ಡಿಆರ್​ಎಫ್, ಎಸ್​​ಡಿಆರ್​ಎಫ್ ಮತ್ತು ರೇಲ್ವೇ ಪೊಲೀಸ್ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಹವಾನಿಯಂತ್ರಿತ ಬೋಗಿಗಳು ಹಳಿ ಬಿಟ್ಟಿದ್ದು ಅವುಗಳಲ್ಲಿ ಪ್ರಯಾಣಿಸುತ್ತಿದ್ದ ಜನ ಗಾಯಗೊಂಡಿದ್ದಾರೆ.

ಚೆನೈ: ಮೈಸೂರು ನಗರದಿಂದ ಹೊರಟ ಮೈಸೂರು-ದರ್ಭಾಂಗ ಭಾಗಮತಿ ಎಕ್ಸ್​ಪ್ರೆಸ್ ಟ್ರೈನು ಕಳೆದ ರಾತ್ರಿ ಸುಮಾರು 9 ಗಂಟೆಗೆ ಚೆನೈ ನಗರಕ್ಕೆ ಹತ್ತಿರವಿರುವ ಕವರಪೆಟ್ಟೈ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲೊಂದಕ್ಕೆ ಢಿಕ್ಕಿ ಹೊಡೆದ ಪರಣಾವಾಗಿ ಪ್ಯಾಸೆಂಜರ್ ಟ್ರೈನಿನ 6 ಬೋಗಿಗಳು ಹಳಿ ತಪ್ಪಿವೆ. ಸ್ಥಳಕ್ಕೆ ತಲುಪಿರುವ ನಮ್ಮ ವರದಿಗಾರ ನೀಡುವ ಮಾಹಿತಿ ಪ್ರಕಾರ ಅಪಘಾತದಲ್ಲಿ ಹಲವು ಜನ ಗಾಯಗೊಂಡಿದ್ದು ಅವರಲ್ಲಿ 9 ಜನಕ್ಕೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಚೆನ್ನೈನ ಸ್ಟ್ಯಾನ್ಲಿ ಆಸ್ಪತ್ರೆ ದಾಖಲಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವಿಜಯವಾಡ ಭೇಟಿ ವೇಳೆ ಕೂದಲೆಳೆ ಅಂತರದಲ್ಲಿ ರೈಲು ಅಪಘಾತದಿಂದ ಪಾರಾದ ಸಿಎಂ ಚಂದ್ರಬಾಬು ನಾಯ್ಡು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.