Mysuru Dasara 2023: ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಸಿದ ಯದುವೀರ್

Mysuru Dasara 2023: ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಸಿದ ಯದುವೀರ್
| Updated By: ಆಯೇಷಾ ಬಾನು

Updated on: Oct 15, 2023 | 1:24 PM

ಇಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು. ಮೊದಲಿಗೆ ಸಿಂಹಾಸನದ ಬಳಿ ತೆರಳಿ ಸಿಂಹಾಸನ ಸುತ್ತ ಮೂರು ಸುತ್ತು ಪ್ರದಕ್ಷಣೆ ಹಾಕಿ ಸಿಂಹಾಸನದ ಬಳಿ ಕುಳಿತು ನವಗ್ರಹ ಪೂಜೆ ಮಾಡಿದರು.

ಮೈಸೂರು, ಅ.15: ಮೈಸೂರಿನಲ್ಲಿ ಗತ ವೈಭವ ಕಳೆಗಟ್ಟಿದೆ. ಮೈಸೂರು ದಸರಾಗೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಅದ್ಧೂರಿ ಚಾಲನೆ ನೀಡಿದ್ದು ದಸರಾ ಸಡಗರ ಶುರುವಾಗಿದೆ. ಶತಮಾನಗಳಿಂದ ನಡೆಯುತ್ತಿರುವ ಖಾಸಗಿ ದರ್ಬಾರ್‌ ಇಂದಿನಿಂದ ಆರಂಭವಾಗಿದ್ದು ಇಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು. ಮೊದಲಿಗೆ ಸಿಂಹಾಸನದ ಬಳಿ ತೆರಳಿ ಸಿಂಹಾಸನ ಸುತ್ತ ಮೂರು ಸುತ್ತು ಪ್ರದಕ್ಷಣೆ ಹಾಕಿ ಸಿಂಹಾಸನದ ಬಳಿ ಕುಳಿತು ನವಗ್ರಹ ಪೂಜೆ ಮಾಡಿದರು.

ಬೆಳಗ್ಗೆ 5ರಿಂದಲೇ ಅರಮನೆಯಲ್ಲಿ ಪೂಜಾ ವಿಧಾನಗಳು ಆರಂಭವಾಗಿವೆ. ಚಂಡಿಕಾಹೋಮ, ಲಲಿತಾ ಸಹಸ್ರನಾಮ ಸಹಿತ ನಾನಾ ಪೂಜೆಗಳು ನೆರವೇರಿದವು. ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌, ತ್ರಿಷಿಕಾ ಕುಮಾರಿ ಹಾಗೂ ಸಂಸ್ಥಾನದವರು, ಅರಸು ಮನೆತನಗಳ ಹಿರಿಯರು ಇಡೀ ಚಟುವಟಿಕೆಯಲ್ಲಿ ಭಾಗಿಯಾದರು. ಬೆಳಗ್ಗೆ 6 ಗಂಟೆಯಿಂದ 6.25ರ ಶುಭ ಮುಹೂರ್ತದಲ್ಲಿ ಸಿಂಹಾಸನಕ್ಕೆ ಸಿಂಹ ಜೋಡಣೆ ನಡೆಯಿತು.ಬೆಳಗ್ಗೆ 07.05 ರಿಂದ 7.45ರ ಶುಭ ಲಗ್ನದಲ್ಲಿ ವಾಣಿವಿಲಾಸ ಅರಮನೆಯಲ್ಲಿ ಕಂಕಣಧಾರಣೆ ನೆರವೇರಿಸಲಾಯಿತು.

ಇನ್ನು ಬೆಳಗ್ಗೆ 9.45ಕ್ಕೆ ಅರಮನೆ ಸವಾರಿ ತೊಟ್ಟಿಗೆ ಗೋಶಾಲೆಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಆನೆ, ಪಟ್ಟದ ಹಸು ಆಗಮನವಾದವು. ಬೆಳಗ್ಗೆ 10.15ಕ್ಕೆ ಕಳಸ‌ ಪೂಜೆ, ಸಿಂಹಾಸನ‌ ಪೂಜೆ ನಡೆಯಲಿದೆ. ಬೆಳಗ್ಗೆ 11.30ಕ್ಕೆ ಸಿಂಹಾಸನಾರೂಢರಾದ ಯದುವೀರ್‌ 11.50ರವರೆಗೆ ಖಾಸಗಿ ದರ್ಬಾರ್ ಮುಂದುವರೆಸಿದರು. ಸಿಂಹಾಸನಕ್ಕೆ ಪೂಜೆ ಸಲ್ಲಿಸಿದ ನಂತರ ವೇದ ಘೋಷಗಳೊಂದಿಗೆ ಪೂಜೆ ಸಲ್ಲಿಸಿ ಖಾಸಗಿ ದರ್ಬಾರ್ ನ್ನು ಯದುವೀರ್‌ ನೆರವೇರಿಸಿದರು.

ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ