AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ: ಮಹಿಷಾಸುರ ಮರ್ದಿನಿ ವಿಗ್ರಹದ ವಿಶೇಷಗಳ ಬಗ್ಗೆ ಅರ್ಚಕ ಶಶಿಶೇಖರ ದೀಕ್ಷಿತ್ ಮಾತು ಇಲ್ಲಿದೆ

ಮೈಸೂರು ದಸರಾ: ಮಹಿಷಾಸುರ ಮರ್ದಿನಿ ವಿಗ್ರಹದ ವಿಶೇಷಗಳ ಬಗ್ಗೆ ಅರ್ಚಕ ಶಶಿಶೇಖರ ದೀಕ್ಷಿತ್ ಮಾತು ಇಲ್ಲಿದೆ

ರಾಮ್​, ಮೈಸೂರು
| Edited By: |

Updated on: Oct 03, 2024 | 9:17 AM

Share

ವಿಶ್ವವಿಖ್ಯಾತ ಮೈಸೂರು ದಸರಾ ಇಂದಿನಿಂದ ಆರಂಭಗೊಂಡು ಮುಂದಿನ ಹತ್ತು ದಿನಗಳ ಕಾಲ ನಡೆಯಲಿದೆ. ಈ ಸಂದರ್ಭದಲ್ಲಿ, ದಸರಾ ಉದ್ಘಾಟನೆಗೂ ಕೆಲವೇ ಕ್ಷಣಗಳ ಮುನ್ನ ಮೈಸೂರಿನ ಚಾಮುಂಡೇಶ್ವರಿ ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ‘ಟಿವಿ9’ ಜತೆ ಮಾತನಾಡಿ, ಮಹಿಷಾಸುರ ಮರ್ದಿನಿ ವಿಗ್ರಹದ ವಿಶೇಷತೆಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ.

ಮೈಸೂರು, ಅಕ್ಟೋಬರ್ 3: ಮೈಸೂರಿನಾದ್ಯಂತ ದಸರಾ ಸಂಭ್ರಮ ಕಳೆಗಟ್ಟಿದ್ದು, ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇಗುಲದಲ್ಲಿ ನವರಾತ್ರಿ ಪೂಜೆಗೆ ಸಕಲ ಸಿದ್ಧತೆ ನೆರವೇರಿದೆ. ಚಾಮುಂಡೇಶ್ವರಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಮಾತನಾಡಿ, ಬ್ರಾಹ್ಮಿ ಮುಹೂರ್ತದಲ್ಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ಮಹಿಷಾಸುರ ಸಂಹಾರಕ್ಕಾಗಿ ಅವತರಿಸಿದ ಚಾಮುಂಡೇಶ್ವರಿ ದೇವಿಯ ರೂಪದಲ್ಲಿ ವಿಗ್ರಹ ಇದೆ. ಅಷ್ಟಭುಜಗಳನ್ನು ಹೊಂದಿರುವುದು, ಆಯುಧಗಳನ್ನು ಹೊಂದಿರುವುದು ಸೇರಿದಂತೆ ಇನ್ನೂ ಹಲವು ವಿಶೇಷಗಳನ್ನು ವಿಗ್ರಹ ಹೊಂದಿದೆ ಎಂದು ಅವರು ಹೇಳಿದರು. ಅರ್ಚಕರು ನೀಡಿದ ವಿವರ ಇಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More